ಬೆಂಗಳೂರು: 2022-23ರಲ್ಲಿ ಉತ್ತೀರ್ಣರಾಗಿರುವ 18ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಮಂಗಳಮುಖಿಯರಿಗೂ ಇದು ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಯುವ ನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ. ಪದವೀಧರರಿಗೆ, 1500 ಡಿಪ್ಲೋಮಾ ಹೋಲ್ಡರ್ಸ್ ಗಳಿಗೆ ಪಾವತಿ ಮಾಡಲಾಗುವುದು ಎಂದರು.
24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಅಂತಹ ಪದವೀಧರರಿಗೆ ಅಥವಾ ಡಿಪ್ಲೋಮಾ ಹೋಲ್ಡರ್ಸ್ ಗಳಿಗೆ ಹಣ ಪಾವತಿ ಮಾಡಲಾಗುವುದಿಲ್ಲ. ನಿರುದ್ಯೋಗಿ ಅಂತಾ ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಪಾವತಿ ಮಾಡಲಾಗುತ್ತದೆ. ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಮಾತ್ರ ಭತ್ಯೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ ಇರಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ. 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ. ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.