ತನ್ನ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ತಮ್ಮ ಆಯ್ಕೆಯ ಹೆಸರನ್ನು ಇಟ್ಟುಕೊಳ್ಳಲು ಸಮೀರ್ ರಾವ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್ ಭಾನೋಟ್ ಅವರು ಈ ತೀರ್ಪು ನೀಡಿದ್ದಾರೆ.
ಅರ್ಜಿದಾರರ ಹೆಸರನ್ನು ಶಹನವಾಜ್ ಎಂಬ ಹೆಸರಿನ ಬದಲು ಎಂಡಿ ಸಮೀರ್ ರಾವ್ ಎಂದು ಬದಲಾಯಿಸಲು ಮತ್ತು ಹೊಸದಾಗಿ 10 ನೇ ತರಗತಿ ಮತ್ತು 12 ನೇ ತರಗತಿ ಪ್ರಮಾಣಪತ್ರಗಳನ್ನು ಈ ಬದಲಾವಣೆಯ ಹೆಸರಿನೊಂದಿಗೆ ನೀಡಲು ಅರ್ಜಿದಾರರ ಅರ್ಜಿಯನ್ನು ಅನುಮತಿಸುವಂತೆ ಹೈಕೋರ್ಟ್ ಪ್ರತಿವಾದಿಗಳಿಗೆ ನಿರ್ದೇಶಿಸಿದೆ.
ಉತ್ತರಪ್ರದೇಶ ಪ್ರೌಢಶಾಲೆ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಹೈಸ್ಕೂಲ್ ಮತ್ತು ಇಂಟರ್ಮೀಡಿಯೇಟ್ ಪರೀಕ್ಷೆಯ ಪ್ರಮಾಣಪತ್ರಗಳಲ್ಲಿ ಹೆಸರನ್ನು ಬದಲಾಯಿಸಲು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಈ ಕ್ರಮವನ್ನ ಪ್ರಶ್ನಿಸಿದ್ದರು.
ಮೇ 25 ರಂದು ತನ್ನ ತೀರ್ಪಿನಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಆಯ್ಕೆಯ ಹೆಸರನ್ನು ಇಡುವ ಅಥವಾ ವೈಯಕ್ತಿಕ ಆದ್ಯತೆಗೆ ಅನುಗುಣವಾಗಿ ಹೆಸರನ್ನು ಬದಲಾಯಿಸುವ ಹಕ್ಕು ಭಾರತದ ಸಂವಿಧಾನದ ಆರ್ಟಿಕಲ್ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಆರ್ಟಿಕಲ್ 21 (ಜೀವನದ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಮತ್ತು ಆರ್ಟಿಕಲ್ 14 (ಸಮಾನತೆಯ ಹಕ್ಕು) ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತೀರ್ಪು ನೀಡಿದೆ. ಅರ್ಜಿದಾರರ ಮನವಿ ತಿರಸ್ಕಾರ ಮಾಡಿರುವುದು ಈ ಆರ್ಟಿಕಲ್ ನಡಿ ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ನ್ಯಾಯಾಲಯ ಹೇಳಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.