ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯ ಗುಪ್ತಾಂಗ ಸೇರಿ ದೇಹದ ವಿವಿಧೆಡೆ ಹತ್ತಾರು ಬಾರಿ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ಮಂಜುನಾಥನಗರ ನಿವಾಸಿ ನಾಗರತ್ನ (32) ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪತಿ ಅಯ್ಯಪ್ಪ(35)ನನ್ನು ಬಂಧಿಸಲಾಗಿದೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅಯ್ಯಪ್ಪನ ಸಹೋದರಿ ಸಂಗೀತಾ ಅವರ ಪತಿ ರಾಜು ಎಂಬುವರ ಸಹೋದರಿ ಪುತ್ರ ಚಂದ್ರು ಎಂಬಾತ ಆರೋಪಿ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಅಯ್ಯಪ್ಪ 12 ವರ್ಷದ ಹಿಂದೆ ನಾಗರತ್ನರನ್ನು ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಪುತ್ರಿ ಇದ್ದಾರೆ. ಸಿ.ಟಿ. ಮಾರ್ಕೆಟ್ ನಲ್ಲಿ ಅಯ್ಯಪ್ಪ ಕೂಲಿ ಕೆಲಸ ಮಾಡಿದರೆ, ನಾಗರತ್ನ ರಾಜಾಜಿನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಈ ಹಿಂದೆ ಶಿವನಗರದ ಸಿದ್ಧಗಂಗಾ ಶಾಲೆಯ ಬಳಿಯ ಬಾಡಿಗೆ ಮನೆಯಲ್ಲಿ ದಂಪತಿ ನೆಲೆಸಿದ್ದರು. ಕಳೆದು ತಿಂಗಳ ಹಿಂದೆಯಷ್ಟೇ ಮಂಜುನಾಥ ನಗರದ ಬಾಡಿಗೆ ಮನೆಗೆ ಬಂದಿದ್ದರು ಎಂದು ಪೊಲೀಸರು ಹೇಳಿದರು.
ಈ ಮಧ್ಯೆ ಅಯ್ಯಪ್ಪನಿಗೆ ತನ್ನ ಪತ್ನಿ ನಾಗರತ್ನಗೆ ಬೇರೆ ವ್ಯಕ್ತಿಯ ಜತೆ ಅನೈತಿಕ ಇರುವ ಅನುಮಾನವಿತ್ತು. ಈ ವಿಚಾರವಾಗಿ ದಂಪತಿ ನಡುವೆ ಪದೇ ಪದೆ ಗಲಾಟೆಯಾಗುತ್ತಿತ್ತು. ನಾಗರತ್ನ ನನ್ನ ಜತೆ ಮಲಗುವುದಿಲ್ಲ. ದೈಹಿಕ ಸಂಪರ್ಕ ಬೆಳೆಸಲು ಅವಕಾಶ ನೀಡುವುದಿಲ್ಲ ಎಂದು ಅಯ್ಯಪ್ಪ ಜಗಳ ಮಾಡುತ್ತಿದ್ದ. ಈ ವೇಳೆ ಅಯ್ಯಪ್ಪನ ಅಕ್ಕ ಸಂಗೀತಾ ಸೇರಿ ಸಂಬಂಧಿಕರು ರಾಜೀ-ಸಂಧಾನ ಮಾಡಿದ್ದರು. ಶಿವನಗರದಿಂದ ಮಂಜು ನಾಥನಗರದ ಬಾಡಿಗೆ ಮನೆಗೆ ಬಂದ ಬಳಿಕವೂ ದಂಪತಿ ನಡುವೆ ಇದೇ ವಿಚಾರಕ್ಕೆ ಜಗಳವಾಗುತ್ತಿತ್ತು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.
ಭಾನುವಾರ ರಾತ್ರಿ ಸಹ ದಂಪತಿ ನಡುವೆ ಅಕ್ರಮ ಸಂಬಂಧದ ವಿಚಾರವಾಗಿ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿ ಅಯ್ಯಪ್ಪ ಚಾಕು ತೆಗೆದು ನಾಗರತ್ನಳಿಗೆ ಹಲವು ಬಾರಿ ಇರಿದಿದ್ದಾನೆ. ಆಕೆಯ ಜನನಾಂಗಕ್ಕೂ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಅಯ್ಯಪ್ಪನ ಅಕ್ಕ ಸಂಗೀತಾಳ ಪತಿಯ ತಂಗಿಯ ಮಗ ಚಂದ್ರು ರಾತ್ರಿ 8.40 ಸುಮಾರಿಗೆ ಮನೆ ಬಳಿ ಬಂದಾಗ ನಾಗರತ್ನ ಬೆತ್ತಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ.
ಈ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.