ಮನೆ ರಾಜಕೀಯ ಪಠ್ಯದಲ್ಲಿ ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆ ಅಳವಡಿಸುವಂತೆ ಬಿಎಸ್ ವೈ ಒತ್ತಾಯ

ಪಠ್ಯದಲ್ಲಿ ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆ ಅಳವಡಿಸುವಂತೆ ಬಿಎಸ್ ವೈ ಒತ್ತಾಯ

0

ತುಮಕೂರು: ತ್ರಿವಿಧ ದಾಸೋಹಿ , ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಲು ಪಠ್ಯದಲ್ಲಿ ಅಳವಡಿಸಬೇಕು ಎಂದು ಕೇಳಿಕೊಂಡರು.

ಇದಕ್ಕೂ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಪ್ರಕಟಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಮಠಕ್ಕೆ ಆಗಮಿಸಿದ್ದಾರೆ.