ಹನೂರು: ಕತ್ತಲು ಕವಿಯುತ್ತಲೇ ಕಾಡಾನೆಯೊಂದು ಗ್ರಾಮಕ್ಕೆ ಆಗಮಿಸಿ ಮರ-ಗಿಡಗಳನ್ನು ನಾಶ ಮಾಡುತ್ತಿರುವ ಘಟನೆ ತಾಲೂಕಿನ ಕಾಡಂಚಿನ ಪೊನ್ನಾಚಿ ಮತ್ತು ಮರೂರು ಗ್ರಾಮಗಳಲ್ಲಿ ನಡೆಯುತ್ತಿದೆ.
ಕತ್ತಲು ಕವಿಯುತ್ತಿದ್ದಂತೆ ಗ್ರಾಮಕ್ಕೆ ಒಂಟಿ ಸಲಗ ಆಗಮಿಸಿ ಮನೆಯ ಮುಂಭಾಗ ಹಾಕಲಾಗಿರುವ ತೆಂಗಿನಮರ, ಹಲಸಿನಮರ ಮತ್ತು ಮಾವಿನ ಮರಗಳಿಗೆ ಹಾನಿಯುಂಟು ಮಾಡುತ್ತದೆ. ಜತೆಗೆ ಗ್ರಾಮಕ್ಕೆ ಅಳವಡಿಸಿರುವ ಕುಡಿಯುವ ನೀರಿನ ಪೈಪ್ ಲೈನ್ ಗಳು, ಜಮೀನುಗಳಲ್ಲಿನ ನೀರಾವರಿ ಪರಿಕರಗಳನ್ನು ಹಾಳು ಮಾಡುತ್ತಿದೆ.
ಕಳೆದ 3 ತಿಂಗಳಿನಿಂದಲೂ ಈ ಒಂಟಿ ಸಲಗ ನಿರಂತರವಾಗಿ ಗ್ರಾಮದತ್ತ ಆಗಮಿಸುತ್ತಿದ್ದು ಸಂಬಂಧಪಟ್ಟ ಅರಣ್ಯ ಇಲಾಖಾ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರು 6 ಗಂಟೆಯಾಗುತ್ತಲೇ ಮನೆಯ ಒಳಗಡೆ ಸೇರಿಕೊಳ್ಳಬೇಕಾದ ಪರಿಸ್ಥಿತಿಯಿದೆ. ಕರ್ಯ ನಿಮಿತ್ತ ನಗರ ಪ್ರದೇಶಗಳಿಗೆ ತೆರಳಿ ಬರುವುದು ತಡವಾದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಗ್ರಾಮ ಸೇರಬೇಕಾದ ಪರಿಸ್ಥಿತಿಯಿದೆ. ಈ ಒಂಟಿ ಸಲಗದಿದ ಹೆಚ್ಚಿನ ಅನಾಹುತ ಸಂಭವಿಸುವ ಮುನ್ನವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.