ಮನೆ ಅಪರಾಧ 2 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

2 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

0

ಮೈಸೂರು: ಕೊಡಗು ಜಿಲ್ಲೆಯ ಕುಶಾಲನಗರದ ಕಾರ್ಯನಿರ್ವಾಹಕ ಇಂಜಿನಿಯರ್​ ಪಿ.ಅಶೋಕ್ ಕುಮಾರ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Join Our Whatsapp Group

49 ಕಿಲೋ ವ್ಯಾಟ್​ ಚಾರ್ಜಿಂಗ್ ಪಾಯಿಂಟ್‌ ಗೆ ಅನುಮತಿ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಗಂಡ 2 ಲಕ್ಷ ರೂ ಹಣವನ್ನ ಮೈಸೂರಿನ ವಿಜಯನಗರ ನಿವಾಸದಲ್ಲಿ ಪಡೆಯುತ್ತಿದ್ದಾಗ ಎಇಇ ಅಶೋಕ್ ಕುಮಾರ್ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಡಿವೈಎಸ್ ಪಿ ಪವನ್ ಕುಮಾರ್, ಇನ್ಸ್​​ ಪೆಕ್ಟರ್​ ಲೋಕೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.