ಮನೆ ರಾಜ್ಯ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್: ಇಲ್ಲಿದೆ ಮಾಹಿತಿ

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್: ಇಲ್ಲಿದೆ ಮಾಹಿತಿ

0

ಬೆಂಗಳೂರು: ಇದೀಗ ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Our Whatsapp Group

ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿ ಡಿ.ಕೆ.ಶಿವಕುಮಾರ್​

ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್​

ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್​.ಕೆ.ಪಾಟೀಲ್

ಬೆಂಗಳೂರು ಗ್ರಾಮಾಂತರ-ಕೆ.ಹೆಚ್​.ಮುನಿಯಪ್ಪ

ರಾಮಲಿಂಗಾರೆಡ್ಡಿ-ರಾಮನಗರ,

ಕೆ.ಜೆ.ಜಾರ್ಜ್​-ಚಿಕ್ಕಮಗಳೂರು

ಎಂ.ಬಿ.ಪಾಟೀಲ್​-ವಿಜಯಪುರ

ದಿನೇಶ್ ಗುಂಡೂರಾವ್​-ದಕ್ಷಿಣ ಕನ್ನಡ

ಹೆಚ್​.ಸಿ.ಮಹದೇವಪ್ಪ-ಮೈಸೂರು,

ಸತೀಶ್ ಜಾರಕಿಹೊಳಿ-ಬೆಳಗಾವಿ

ಪ್ರಿಯಾಂಕ್​ ಖರ್ಗೆ-ಕಲಬುರಗಿ,

ಶಿವಾನಂದಪಾಟೀಲ್-ಹಾವೇರಿ

ಜಮೀರ್​ ಅಹ್ಮದ್ ಖಾನ್​​-ವಿಜಯನಗರ

ಶರಣಬಸಪ್ಪ ದರ್ಶನಾಪುರ-ಯಾದಗಿರಿ

ಈಶ್ವರ್ ಖಂಡ್ರೆ-ಬೀದರ್,

ಚಲುವರಾಯಸ್ವಾಮಿ-ಮಂಡ್ಯ

ಎಸ್​.ಎಸ್​.ಮಲ್ಲಿಕಾರ್ಜುನ್​-ದಾವಣಗೆರೆ

ಸಂತೋಷ್ ಲಾಡ್-ಧಾರವಾಡ

ಶರಣಪ್ರಕಾಶ್ ಪಾಟೀಲ್​-ರಾಯಚೂರು

ಆರ್​.ಬಿ.ತಿಮ್ಮಾಪುರ-ಬಾಗಲಕೋಟೆ

ಕೆ.ವೆಂಕಟೇಶ್​-ಚಾಮರಾಜನಗರ

ಕೊಪ್ಪಳ-ಶಿವರಾಜ್​ ತಂಗಡಗಿ

ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು, ಅದರಲ್ಲೂ ಮುಖ್ಯವಾಗಿ ಒಂದೇ ಜಿಲ್ಲೆಯ ಇಬ್ಬರು ಸಚಿವರುಗಳ ನಡುವೆ ಭಾರೀ ಲಾಬಿಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ತಲೆನೋವಾಗಿತ್ತು. ಆದರೆ, ಇದೀಗ ಎಲ್ಲಾ ಗೊಂದಲಗಳನ್ನು ನಿವಾರಿಸಿ ಅಂತಿಮವಾಗಿ ಜಿಲ್ಲಾ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.