ಮನೆ ಅಪರಾಧ ಚಾಮರಾಜನಗರ: ಮದ್ಯಕ್ಕೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಸ್ನೇಹಿತರು

ಚಾಮರಾಜನಗರ: ಮದ್ಯಕ್ಕೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಸ್ನೇಹಿತರು

0

ಚಾಮರಾಜನಗರ: ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆಗೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ನಿನ್ನೆ (ಗುರುವಾರ) ನಡೆದಿದೆ.

Join Our Whatsapp Group

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು (19) ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್ ಅಲಿಯಾಸ್​ ನಾಗೇಂದ್ರ (19) ಆತ್ಮಹತ್ಯೆಗೆ ಯತ್ನಿಸಿದವರು.

ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮನು ಎಂಬಾತನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ನಾಗೇಂದ್ರ ಹಾಗೂ ಮನು ಪ್ರಾಣ ಸ್ನೇಹಿತರು. ಜೊತೆಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದರು. ನಾಗೇಂದ್ರನ ಕೈಯಲ್ಲಿ ಮನು ಎಂಬ ಹೆಸರು ಹಾಗೂ ಮನು ಕೈಯಲ್ಲಿ ನಾಗೇಂದ್ರ ಎಂಬ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಇಬ್ಬರ ಸ್ನೇಹ ಸಂಬಂಧ ನೋಡಿ ಗ್ರಾಮದವರೇ ಇವರನ್ನು ಆಪ್ತಮಿತ್ರರು ಎಂದೇ ಕರೆಯುತ್ತಿದ್ದರು.

ನಾಗೇಂದ್ರರ ತಂದೆ- ತಾಯಿ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರೂ ಇಲ್ಲ. ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ. ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ‌.

ಇದರಿಂದ ಬೇಸತ್ತು ಇಬ್ಬರೂ ಸಹ ಕೊಳ್ಳೇಗಾಲ ತಾಲೂಕಿನ ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮದ್ಯದ ಜೊತೆಗೆ ವಿಷ ಸೇವಿಸಿದ್ದು, ರಸ್ತೆಯಲ್ಲಿಯೇ ಜೀವನ್ಮರಣದ ಮಧ್ಯೆ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ‌.

ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಸಾವನ್ನಪ್ಪಿದ್ದಾನೆ. ಮನು ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.