ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಈ ವರ್ಷದ ಮೊದಲ ಚಂಡಮಾರುತ “ಬಿಪರ್ ಜಾಯ್” ಮುಂದಿನ 24 ಗಂಟೆಗಳಲ್ಲಿ ಭಾರೀ ತೀವ್ರಗತಿಯಲ್ಲಿ ಉತ್ತರ ಈಶಾನ್ಯ ಭಾಗದಲ್ಲಿ ಬಡಿದಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಮುಂದಿನ 24ಗಂಟೆಯಲ್ಲಿ ಬಿಪರ್ ಜಾಯ್ ಚಂಡಮಾರುತವು ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದರ ಪರಿಣಾಮ ಭಾರೀ ಮಳೆ ಸುರಿಯಲಿದೆ. ಅಲ್ಲದೇ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.
ಪ್ರಬಲ ಚಂಡಮಾರುತ ಬೀಸಲಿರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ಗುಜರಾತ್ ನ ಜನಪ್ರಿಯ ಪ್ರವಾಸಿ ತಾಣವಾದ ವಲ್ಸಾಡ್ ಅರಬ್ಬಿ ಸಮುದ್ರ ಪ್ರದೇಶದಲ್ಲಿನ ತಿಥಾಲ್ ಬೀಚ್ ಗೆ ಪ್ರವಾಸಿಗರು ತೆರಳದಂತೆ ಜೂನ್ 14ರವರೆಗೆ ನಿರ್ಬಂಧ ವಿಧಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿರುವ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ.
ಒಂದು ವೇಳೆ ಅಗತ್ಯ ಬಿದ್ದರೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ವಲ್ಸಾಡ್ ತಹಸೀಲ್ದಾರ್ ಟಿಸಿ ಪಟೇಲ್ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಕರ್ನಾಟಕ, ಕೇರಳ, ಗುಜರಾತ್ ಮತ್ತು ಲಕ್ಷದ್ವೀಪ ಕರಾವಳಿ ಪ್ರದೇಶದಲ್ಲಿನ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದ್ದು, ಕೇರಳದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.