ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ ಗಳನ್ನು ಗಳಿಸಿತ್ತು. ಒಂದು ಹಂತದಲ್ಲಿ 152 ರನ್ ಗೆ ಆರು ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ನಂತರ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಶತಕದ ಜೊತೆಯಾಟವಾಡಿ ಆಧರಿಸಿದರು.
ಭಾರತ ಟೆಸ್ಟ್ ತಂಡದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ವಿಶಿಷ್ಟ ಸಾಧನೆ ಮಾಡಿದ್ದಾರೆ. ಓವಲ್ ಕ್ರೀಡಾಂಗಣದಲ್ಲಿ ಸತತ ಮೂರು ಅರ್ಧಶತಕ ಬಾರಿಸುವ ಮೂಲಕ ಸರ್ ಬ್ರಾಡ್ಮನ್ ಮತ್ತು ಅಲನ್ ಬಾರ್ಡರ್ ಅವರ ದಾಖಲೆ ಸರಿಗಟ್ಟಿದ್ದಾರೆ. ಠಾಕೂರ್ ಅವರು 57(36), 60(72) ಮತ್ತು 51(109) ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅಗ್ರ ಬ್ಯಾಟ್ಸ್ಮನ್ಗಳ ಎಲೈಟ್ ಕ್ಲಬ್ ಗೆ ಸೇರಿದ್ದಾರೆ.
ಶುಕ್ರವಾರ ಫೈನಲ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 109 ಎಸೆತಗಳಲ್ಲಿ 51 ರನ್ ಗಳಿಸಿದ್ದರು. ಇದರಲ್ಲಿ ಆರು ಬೌಂಡರಿ ಒಳಗೊಂಡಿತ್ತು. ಅಲ್ಲದೆ ರಹಾನೆ ಜೊತೆ ಸೇರಿ ಏಳನೇ ವಿಕೆಟ್ ಗೆ 109 ರನ್ ಜೊತೆಯಾಟವಾಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.