ಮೈಸೂರು: ನಗರದ ದೇವರಾಜ ಅರಸು ರಸ್ತೆ, ಸಯ್ಯಾಜಿ ರಾವ್ ರಸ್ತೆ, ಅಶೋಕ ರಸ್ತೆ ಹಾಗೂ ಪುರಭವನದಲ್ಲಿ ಪ್ರಾಯೋಗಿಕವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಿನ್ನೆ(ಶುಕ್ರವಾರ) ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮೇಯರ್ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿದೆ. ಈ ಸಮಸ್ಯೆ ಪರಿಹರಿಸಲು ಒಟ್ಟು 7 ಕಡೆಗ ಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೊಳಿಸಲು ಪಾಲಿಕೆ ಸಿದ್ಧತೆ ಕೈಗೊಂಡಿತ್ತು. ಆದರೆ ಮೊದಲ ಹಂತದಲ್ಲಿ ನಾಲ್ಕು ಕಡೆಗಳಲ್ಲಿ ಪ್ರಾಯೋಗಿಕ ವಾಗಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಿ ಸಾಧಕ ಬಾಧಕವನ್ನು ನೋಡಿಕೊಂಡು ಎರಡನೇ ಹಂತದಲ್ಲಿ ವಿನೋಬಾ ರಸ್ತೆ, ಹರ್ಷ ರಸ್ತೆ, ಧನ್ವಂತ್ರಿ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರುವುದು ಸೂಕ್ತ ಎಂದು ಸಭೆ ಅಭಿಪ್ರಾಯಪಟ್ಟಿತು.
ನಗರದ ದೇವರಾಜ ಅರಸು ರಸ್ತೆ, ಸಯ್ಯಜಿ ರಾವ್ ರಸ್ತೆ, ಅಶೋಕ ರಸ್ತೆ ಹಾಗೂ ಪುರಭವನದಲ್ಲಿ ದ್ವಿ ಚಕ್ರ ವಾಹನಗಳಿಗೆ ಮೊದಲ ಎರಡು ಗಂಟೆಗೆ 10 ರೂ., ನಂತರದ ಪ್ರತಿ ಗಂಟೆಗೆ 10 ರೂ. ಶುಲ್ಕ, ನಾಲ್ಕು ಚಕ್ರದ ವಾಹನಗಳಿಗೆ ಮೊದಲ ಎರಡು ಗಂಟೆಗೆ 30 ರೂ., ನಂತರದ ಪ್ರತಿ ಗಂಟೆಗೆ 20 ರೂ. ಶುಲ್ಕ ವಿಧಿಸಲು ಸಭೆ ಒಪ್ಪಿಗೆ ಸೂಚಿಸಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.