ಮನೆ ಅಪರಾಧ ಕಾರಿಗೆ ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿ: ಗ್ರಾಪಂ ಸದಸ್ಯ ಸಾವು

ಕಾರಿಗೆ ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿ: ಗ್ರಾಪಂ ಸದಸ್ಯ ಸಾವು

0

ಮೈಸೂರು: ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಗ್ರಾ.ಪಂ. ಸದಸ್ಯ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.

Join Our Whatsapp Group

ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್​​​​​​​ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ.

ಮೂವರು ಗಾಯಾಳುಗಳು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾ.ಪಂ. ಸದಸ್ಯ ತಮ್ಮ ಕುಟುಂಬದ ಜೊತೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.