ಮನೆ ಪ್ರಕೃತಿ ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಜಾಗೃತಿ

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಜಾಗೃತಿ

ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿಸಲು ಭಕ್ತರು ಮುಂದಾಗಬೇಕು: ಗಿರೀಶ್ ಮನವಿ

0

ಮೈಸೂರು: ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

Join Our Whatsapp Group

ಸಾಂಸ್ಕೃತಿಕ ನಗರಿಯನ್ನು  ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.

ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.

ಮೆಟ್ಟಿಲು ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಜಾಗೃತಿ ಮೂಡಿಸಿದ್ದಾರೆ.

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ ಎಂಬ ಸಂದೇಶ ಸಾರುವ ಭಿತ್ತಿ ಚಿತ್ರಗಳನ್ನ ಪ್ರದರ್ಶಿಸುತ್ತಾ ಭಕ್ತರಿಗೆ ಬಟ್ಟೆ ಬ್ಯಾಗ್ ಗಳನ್ನ ವಿತರಿಸಿ ಪರಿಸರ ಸಂರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆ ಕೂಗಿ ಅರಿವು ಮೂಡಿಸಿದ್ದಾರೆ.ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ನ ಜಾಗೃತಿ ಕಾರ್ಯಕ್ರಮಕ್ಕೆ ಪಾಲಿಕೆ ಅಧಿಕಾರಿಗಳು ಸಹ ಕೈ ಜೋಡಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ  ಗಿರೀಶ್, ಚಾಮುಂಡಿ ಬೆಟ್ಟದ ಪರಿಸರ ರಕ್ಷಿಸಲು ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ವಲಯಕ್ಕೆ ನಾಗರೀಕರು ಕೈಜೋಡಿಸಬೇಕಿದೆ, ಮನೆಯಿಂದಲೇ  ಪ್ಲಾಸ್ಟಿಕ್ ಬಳಕೆ ತರದ ಹಾಗೇ ಸಾರ್ವಜನಿಕರು ಮುಂದಾಗಬೇಕು ಸರ್ಕಾರದ ನಿಯಮವನ್ನ ಪಾಲಿಸದೇ ಪ್ಲಾಸ್ಟಿಕ್ ಬಳಸಿದರೆ ದಂಡವಿಧಿಸಲಾಗುತ್ತದೆ ಎಂದರು.

ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟದ   ಪರಿಸರ ರಕ್ಷಣೆಗೆ ಸಾಮಾಜಿಕ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ, ಮುಂದಿನ‌ ದಿನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ತಡೆಗಟ್ಟಲು ತಿರುಪತಿ ಗೋಪಾಲಸ್ವಾಮಿ ಬೆಟ್ಟದ ಮಾದರಿಯಲ್ಲಿ ತಪಾಸಣ ಕೇಂದ್ರ ರಚಿಸಲು ಚಿಂತನೆಯಿದೆ ಎಂದು ತಿಳಿಸಿದರು.

ಮೈಸೂರು ನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಲ್ಲಿಸಲು ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ, ಮೈಸೂರು ಸ್ವಚ್ಛನಗರಿಯಾಗಿದ್ದು, ಆಷಾಢ ಮಾಸದಲ್ಲಿ  ಬೆಟ್ಟಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಿಮಿಸುತ್ತಾರೆ. ಪ್ಲಾಸ್ಟಿಕ್ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲಾಗುವುದು. ದಯಮಾಡಿ ಸಾರ್ವಜನಿಕರು ಸಹಕರಿಸಬೇಕಿದೆ,  ವೈಜ್ಞಾನಿಕವಾಗಿ  ಕಸ ನಿರ್ಮೂಲನೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕಿದೆ ಮೈಸೂರು ನಗರಪಾಲಿಕೆಯೊಂದಿಗೆ ಸ್ವಯಂಸೇವಕರ ತಂಡ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಚಿನ್ನ ಬೆಳ್ಳಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್,ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಪರಿಸರ ಇಂಜಿನಿಯರ್ ಜ್ಯೋತಿ, ಕಿರಿಯ ಆರೋಗ್ಯ ನಿರೀಕ್ಷಕರು ಪ್ರೀತಿ, ರಾಕೇಶ್, ಸಚಿಂದ್ರ, ಚಕ್ರಪಾಣಿ, ಚೇತನ್ ಆರಾಧ್ಯ, ಬಸವರಾಜು, ಮಂಜುನಾಥ,ಉಮಾ, ವನಜಾಕ್ಷಿ, ರಂಗಸ್ವಾಮಿ, ಮಂಜುನಾಥ್ ಹಾಗೂ ಇನ್ನಿತರರು ಹಾಜರಿದ್ದರು.