ಶಿವಮೊಗ್ಗ: ಇಂದಿನಿಂದ ಸಿಗಂದೂರು ಲಾಂಚ್ ನಲ್ಲಿ ವಾಹನಗಳಿಗೆ ಅವಕಾಶ ನೀಡದೇ, ಕೇವಲ ಜನರನ್ನು ಮಾತ್ರ ಶರಾವತಿ ಹಿನ್ನೀರಿನ ಒಂದು ಬದಿಯಿಂದ ಇನ್ನೊಂದು ಬದಿಗೆ ಸಾಗಣೆ ಮಾಡಲು ನಿರ್ಧರಿಸಲಾಗಿದೆ.
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ತಗ್ಗಿರುವ ಕಾರಣದಿಂದಾಗಿ ಹಿನ್ನೀರಿನಲ್ಲಿ ವಾಹನಗಳನ್ನು ಹೇರಿಕೊಂಡು ಲಾಂಚ್ ಚಾಲನೆ ಮಾಡಲು ಸಾಧ್ಯವಾಗದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನು ವಾಹನಗಳ ಮೂಲಕ ಸಿಗಂದೂರಿಗೆ ತೆರಳಬೇಕೆಂದರೆ 130 ಕಿಲೋಮೀಟರ್ ಸುತ್ತಿಕೊಂಡು ಬರಬೇಕು.
ಇಲ್ಲವೇ ಶರಾವತಿ ಹಿನ್ನೀರಿನ ಅಂಬಾರಗೋಡ್ಲು ಭಾಗದಲ್ಲಿ ವಾಹನಗಳನ್ನು ನಿಲ್ಲಿಸಿ ಲಾಂಚ್ ಮೂಲಕ ಶರಾವತಿ ಹಿನ್ನೀರನ್ನು ದಾಟಿ ಬಳಿಕ ಆ ಭಾಗದಲ್ಲಿ ಸಿಗುವ ಬಾಡಿಗೆ ವಾಹನಗಳಲ್ಲಿ ಸಿಗಂದೂರಿಗೆ ಭೇಟಿ ನೀಡಬೇಕಿದೆ.
ಲಾಂಚ್ ನಲ್ಲಿ ವಾಹನ ಸಾಗಣೆ ಸ್ಥಗಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದ್ವೀಪವಾಸಿಗಳು ಅತಂತ್ರರಾಗಲಿದ್ದಾರೆ.
ಶರಾವತಿ ಹಿನ್ನೀರಿನ ಆಚೆಗಿನ ದ್ವೀಪ ಪ್ರದೇಶದಲ್ಲಿ 30 ಸಾವಿರಕ್ಕೂ ಅಧಿಕ ಜನರಿದ್ದಾರೆ. ಇವರು ತಾಲೂಕು ಕೇಂದ್ರ ಸಾಗರಕ್ಕೆ ಹಾಗೂ ತಾವು ಕೆಲಸ ಮಾಡುವ ಸ್ಥಳಗಳಿಗೆ ತೆರಳಲು ಹಿನ್ನೀರನ್ನು ದಾಟಿ ಬರಲೇಬೇಕು.
ಇದೀಗ ಲಾಂಚ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸುತ್ತಿರುವುದರಿಂದ ತಮ್ಮ ವಾಹನಗಳಿಲ್ಲದೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.