ದಾವಣಗೆರೆ: ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಹರಿಹರ ನಗರಸಭೆಯ 5ನೇ ವಾರ್ಡ್ ಸದಸ್ಯೆ, ಪತಿ, ಪುತ್ರ ಮತ್ತು ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆಯ ಐದನೇ ವಾರ್ಡ್ ಸದಸ್ಯೆ ನಾಗರತ್ನ, ಅವರ ಪತಿ ಮಂಜುನಾಥ, ಪುತ್ರ ಡಾ. ರೇವಂತ, ಇಂಜಿನಿಯರ್ ಹಮೀದ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.
ಹರಿಹರ ನಗರಸಭೆ ವ್ಯಾಪ್ತಿಯ ಐದನೇ ವಾರ್ಡ್’ನಲ್ಲಿ ಗುತ್ತಿಗೆದಾರ ಮಜೀದ್ ಎಂಬುವರ ಮಾಡಿದ್ದ ಕಾಮಗಾರಿಗಳ ಬಿಲ್ ನೀಡಲು ಸದಸ್ಯೆ ನಾಗರತ್ನ ಶೇ. 10 ಕಮಿಷನ್ ಗೆ ಬೇಡಿಕೆಯಿಟ್ಟಿದ್ದರು. ಅದಕ್ಕೆ ಅವರ ಪತಿ, ಪುತ್ರ ಮತ್ತು ನಗರಸಭೆ ಇಂಜಿನಿಯರ್ ಒತ್ತಡ ಹಾಕಿದ್ದರು.
ಈ ಬಗ್ಗೆ ಮಜೀದ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಬೆಳಗ್ಗೆ ಸದಸ್ಯೆ ಗುತ್ತಿಗೆದಾರ ಮಜೀದ್ ಅವರಿಂದ 20 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ನಾಗರತ್ನ ಅವರ ಪತಿ ದಾವಣಗೆರೆಯಲ್ಲಿ ಬ್ಯಾಂಕ್ ಉದ್ಯೋಗಿ. ಪುತ್ರ ವೈದ್ಯರಾಗಿದ್ದಾರೆ. ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಬಂಧನಕ್ಕೆ ಒಳಗಾಗಿರುವುದು ವಿಶೇಷ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.