ಮನೆ ರಾಜ್ಯ ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಗೊಂದಲವನ್ನುಂಟು ಮಾಡುವ ಯತ್ನ: ಬಿಎಸ್’ವೈ ಆರೋಪ

ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಗೊಂದಲವನ್ನುಂಟು ಮಾಡುವ ಯತ್ನ: ಬಿಎಸ್’ವೈ ಆರೋಪ

0

ಶಿವಮೊಗ್ಗ: ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗೊಂದಲ ಉಂಟು ಮಾಡುಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Join Our Whatsapp Group

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10 ಕೆಜಿ ಅಕ್ಕಿ ಕೊಡುವ ಗ್ಯಾರಂಟಿ ಘೋಷಿಸುವಾಗ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಕಿ ನೀಡುವುದಾಗಿ ಹೇಳಿರಲಿಲ್ಲ. ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ. ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆ. ಹೀಗಾಗಿ  ಅಕ್ಕಿ ಖರೀದಿ ಮಾಡಿಯಾದರೂ ತರಲಿ ಅಥವಾ ಏನಾದರೂ ಮಾಡಲಿ, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಲೇಬೇಕು ಎಂದು ಆಗ್ರಹಿಸಿದರು.