ಯಲ್ಲಾಪುರ: ಗ್ಯಾಸ್ ಟ್ಯಾಂಕರೊಂದು ಲಾರಿಗೆ ಢಿಕ್ಕಿ ಹೊಡೆದು ಹೆದ್ದಾರಿ ಮಧ್ಯೆ ಉರುಳಿಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಲಾರಿ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಹೊರಟಿದ್ದ ಗ್ಯಾಸ್ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ರಸ್ತೆ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯವುಂಟಾಯಿತು. ಘಟನೆಯಲ್ಲಿ ಯಾರಿಗೂ ಯಾವುದೇ ತರಹದ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗುವ ಸಂಭವವೂ ಉಂಟಾಯಿತಲ್ಲದೇ ರಾತ್ರಿಯಾದ್ದರಿಂದ ಕಾರ್ಯಾಚರಣೆಗೂ ಸಮಸ್ಯೆಯಾಯಿತೆನ್ನಲಾಗಿದೆ.
ತೀರಾ ತುರ್ತು ಇದ್ದ ಕೆಲವು ವಾಹನಗಳು ಶಿರಸಿ ಮಾರ್ಗವಾಗಿ ಕಾರವಾರ ಅಂಕೋಲಾ ಕುಮಟಾ ಕಡೆಗೆ ಹೋದವು. ಟ್ಯಾಂಕರ್ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.