ಮನೆ ಅಪರಾಧ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿವರಿಂದ ಸುಲಿಗೆ: ಕಾಂಗ್ರೆಸ್ ಮುಖಂಡ ಸೇರಿದಂತೆ ನಾಲ್ವರ ಬಂಧನ

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿವರಿಂದ ಸುಲಿಗೆ: ಕಾಂಗ್ರೆಸ್ ಮುಖಂಡ ಸೇರಿದಂತೆ ನಾಲ್ವರ ಬಂಧನ

0

ಬೆಂಗಳೂರು: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್​​ ಮುಖಂಡ ಸೇರಿದಂತೆ ಇಬ್ಬರನ್ನು ಹಾಗೂ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ನಗರದ ಆರ್​ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಸುಂಕದಕಟ್ಟೆಯ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್, ಸೋಮುಗೌಡ, ಉಮೇಶ್ ಹಾಗೂ ಖಾಜಾಮೊಯಿನುದ್ದೀನ್ ಬಂಧಿತರು.

ಕಳೆದ ಜೂನ್​ 21 ರಂದು ಬೆಳಗ್ಗೆ 8.30 ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಜಾಮೊಯಿನುದ್ದೀನ್ ಹಾಗೂ ಉಮೇಶ ಎಂಬುವವರು ಮಾಗಡಿಯಲ್ಲಿ ಗೋಮಾಂಸ ಖರೀದಿಸಿ ಶಿವಾಜಿ ನಗರಕ್ಕೆ ಸ್ಕಾರ್ಪಿಯೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು.

ಈ ವೇಳೆ ತುಮಕೂರು ರಸ್ತೆಯಲ್ಲಿ ವಾಹವನ್ನು ಅಡ್ಡಗಟ್ಟಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್ ಹಾಗೂ ಸ್ನೇಹಿತರು ನಿಮ್ಮ ವಾಹನ ನಮ್ಮ ಇನ್ನೋವಾ ಕಾರಿಗೆ ಟಚ್ ಆಗಿ ಡ್ಯಾಮೇಜ್​ ಆಗಿದ್ದು, ಹಣ ನೀಡುವಂತೆ ಧಮ್ಕಿ ಹಾಕಿದ್ದಾರೆ. ನಂತರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಕ್ಕೆ 2 ಲಕ್ಷ ರೂ.ಗೆ ಡಿಮಾಂಡ್ ಮಾಡಿದ್ದು, ಜತೆಗೆ ಹಲ್ಲೆ ಆರೋಪ ಮಾಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಂದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿ ಪ್ರಶಾಂತ್ ಹಾಗೂ ಸೋಮು ಗೌಡ ಇಬ್ಬರ ಬಂಧನ ಮಾಡಲಾಗಿದೆ. ಮತ್ತೊಂದೆಡೆ ಗೋಮಾಂಸ ಅಕ್ರಮ ಸಾಗಾಟ ಮಾಡುತ್ತಿದ್ದ ಹಿನ್ನಲೆ ಉಮೇಶ್ ಹಾಗೂ ಖಾಜಾಮೊಯಿನುದ್ದೀನ್ ​ನನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.