ಪಾಂಡವಪುರ: ಗ್ರಾಮ ಲೆಕ್ಕಾಧಿಕಾರಿಗೆ ಸ್ಥಳ ನಿಯೋಜನೆಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ತಹಸೀಲ್ದಾರ್ ಲೋಕಾಯುಕ್ತ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ನೇರವಾಗಿ ಗುರುವಾರ ಸಿಕ್ಕಿಬಿದ್ದಿದ್ದಾರೆ.
ತಹಸೀಲ್ದಾರ್ ಕೆ.ಸಿ.ಸೌಮ್ಯಾ ಅವರು ಗ್ರಾಮ ಲೆಕ್ಕಾಧಿಕಾರಿಯ ಸ್ಥಳ ನಿಯೋಜನೆಗೆ ಸಂಬಂಧಿಸಿದಂತೆ 40 ಸಾವಿರ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೊಡ್ಡಬೋಗನಹಳ್ಳಿ ಮತ್ತು ಗುಮ್ಮನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮರಿಸ್ವಾಮಿ ಅವರನ್ನು ಬೇರೆಡೆಗೆ ನಿಯೋಜಿಸಲು 40ಸಾವಿರಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ವೇಳೆ ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರನ್ನು ಲೋಕಾಯುಕ್ತರು ಬಲೆಗೆ ಕೆಡವಿದ್ದಾರೆ.
ತಹಸೀಲ್ದಾರ್ ಸ್ಥಳ ನಿಯೋಜನೆಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗ್ರಾಮ ಲೆಕ್ಕಾಧಿಕಾರಿ ಬುಧವಾರ ಲೋಕಾಯುಕ್ತರಿಗೆ ನೀಡಿದ್ದ ದೂರಿನ ಮೇರೆಗೆ ಗುರುವಾರ ಬೆಳಗಿನಿಂದಲೂ ಮಾರು ವೇಷದಲ್ಲಿ ತಾಲೂಕು ಕಚೇರಿಯಲ್ಲಿ ಸುತ್ತಾಡಿದ ಲೋಕಾಯುಕ್ತ ಪೊಲೀಸರು ಗುರುವಾರ ರಾತ್ರಿ ದೂರು ನೀಡಿದ ವ್ಯಕ್ತಿ ಹಣ ನೀಡತ್ತಿದ್ದ ವೇಳೆ ಏಕಾಏಕಿ ದಾಳಿನಡಿಸಿದ್ದಾರೆ.
ಲೋಕಾಯಿಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ಮಾಲು ಸಮೇತ ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರನ್ನು ವಶಕ್ಕೆ ಪಡೆದರು.
ದಾಳಿಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ, ಪ್ರಕಾಶ್, ಲೋಕೇಶ್ ಗೌಡ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.