ಸ್ಯಾಂಡಲ್ ವುಡ್ ನಲ್ಲಿ ಕಳೆದ ವರ್ಷ ತೆರೆಕಂಡು ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡ ಸಿನಿಮಾ ‘ಕಾಂತಾರ’. ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ತೆರೆಕಂಡ ‘ಕಾಂತಾರ’, ಆನಂತರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬದಲಾಗಿತ್ತು. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬಂದು, ಅಲ್ಲಿಯೂ ದೊಡ್ಡ ಹಿಟ್ ಆಗಿತ್ತು. ಈಗ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಅದರ ಪ್ರಿಕ್ವೇಲ್ ಮಾಡಲು ಮುಂದಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ‘ಕಾಂತಾರ 2’ ಯಾವಾಗ ಶುರುವಾಗಲಿದೆ ಎಂಬ ಬಗ್ಗೆ ಎಲ್ಲರಲ್ಲಿಯೂ ಕುತೂಹಲವಿತ್ತು. ಸದ್ಯ ‘ಕಾಂತಾರ 2’ ಬಗ್ಗೆ ಬಿಗ್ ಅಪ್ಡೇಟ್ ಒಂದು ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
‘ಕಾಂತಾರ 2’ ಸಿನಿಮಾಗೆ ಯಾವಾಗ ಮುಹೂರ್ತ?
ಸದ್ಯ ಎಲ್ಲರ ಪ್ರಶ್ನೆ ‘ಕಾಂತಾರ 2’ ಸಿನಿಮಾದ ಮುಹೂರ್ತ ಯಾವಾಗ? ಶೂಟಿಂಗ್ ಯಾವಾಗ ಆರಂಭವಾಗಲಿದೆ ಎಂಬುದು. ಅದಕ್ಕೀಗ ಉತ್ತರ ಸಿಕ್ಕಿದೆ. ಮೂಲಗಳ ಪ್ರಕಾರ, ಆಗಸ್ಟ್ 27ರಂದು ‘ಕಾಂತಾರ 2’ ಸಿನಿಮಾಗೆ ಮುಹೂರ್ತ ನಡೆಯಲಿದ್ದು, ಸದ್ಯ ಈ ಬಗ್ಗೆ ಪ್ರೊಡಕ್ಷನ್ ಹೌಸ್ ನಲ್ಲಿ ಚರ್ಚೆಗಳು ನಡೆಯುತ್ತಿವೆಯಂತೆ. ಸೆಪ್ಟೆಂಬರ್ನಲ್ಲಿ ಶೂಟಿಂಗ್ ಆರಂಭಿಸುವ ಬಗ್ಗೆಯೂ ಮಾತುಕತೆ ಮಾಡಲಾಗುತ್ತಿದೆಯಂತೆ, ‘ಕಾಂತಾರ 2’ ಕಥೆಯು ಮುಂದುವರಿಗ ಭಾಗವಲ್ಲ. ಇದು ಈಗಾಗಲೇ ಬಂದಿರುವ ‘ಕಾಂತಾರ’ ಚಿತ್ರದ ಹಿಂದಿನ ಕಥೆ. ‘ಕಾಂತಾರ’ ಚಿತ್ರದ ಹೀರೋ ಶಿವನ ತಂದೆಯ ಹಿನ್ನೆಲೆಯಲ್ಲಿ ಕಥೆ ಸಾಗಲಿದ್ದು, ಬಹಳ ಮುತುವರ್ಜಿಯಿಂದ ಸ್ಕ್ರಿಪ್ಟ್ ಕೆಲಸಗಳು ಸಾಗಿವೆ. ಈ ಬಾರಿ ಇನ್ನೂ ದೊಡ್ಡಮಟ್ಟದಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಪ್ಲ್ಯಾನ್ ಮಾಡಿಕೊಂಡಿದೆ ಎಂಬ ಮಾಹಿತಿ ಇದೆ.
ಕುದುರೆ ಸವಾರಿ ಕಲಿಯುತ್ತಿರುವ ರಿಷಬ್ ಶೆಟ್ಟಿ
ಇನ್ನು, ನಟ ರಿಷಬ್ ಶೆಟ್ಟಿ ಅವರು ಈ ಚಿತ್ರಕ್ಕಾಗಿ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ‘ಕಾಂತಾರ 2’ ಸಿನಿಮಾದಲ್ಲಿ ಇದಕ್ಕೆ ಸಂಬಂಧಿಸಿದ ದೃಶ್ಯಗಳು ಇರುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನು, ‘ಕಾಂತಾರ 2’ ಸಿನಿಮಾದಲ್ಲಿ ಯಾವೆಲ್ಲ ಕಲಾವಿದರು ಇದ್ದಾರೆ ಎಂಬ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಸಿಕ್ಕಿಲ್ಲ. ರಿಷಬ್ ಶೆಟ್ಟಿ ಬಿಟ್ಟು ಬೇರೆ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ವಿಚಾರದ ಬಗ್ಗೆ ರಹಸ್ಯ ಕಾಯ್ದುಕೊಂಡಿದೆ ಚಿತ್ರತಂಡ.
‘ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದರೆ, ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ, ಸ್ವರಾಜ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಶೈನ್ ಶೆಟ್ಟಿ, ವಿನಯ್ ಬಿದ್ದಪ್ಪ, ದೀಪಕ್ ರೈ, ನವೀನ್ ಪಡೀಲ್ ಸೇರಿದಂತೆ ಅನೇಕರು ನಟಿಸಿದ್ದರು. ಸದ್ಯದ ಮಾಹಿತಿ ಪ್ರಕಾರ, ‘ಕಾಂತಾರ’ಗೆ ಕೆಲಸ ಮಾಡಿದ್ದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಅವರು ‘ಕಾಂತಾರ 2’ ಚಿತ್ರಕ್ಕೂ ಕೆಲಸ ಮಾಡುವುದು ಖಚಿತ ಎನ್ನಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.