ಜೂನ್ 16ರಂದು ತೆರೆಕಂಡ ‘ಆದಿಪುರುಷ್’ ಸಿನಿಮಾ (Adipurush Movie) ಹೇಳಿಕೊಳ್ಳುವಂತಹ ಕಲೆಕ್ಷನ್ ಮಾಡಿಲ್ಲ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೆಗೆಟಿವ್ ಪ್ರತಿಕ್ರಿಯೆ ಸಿಕ್ಕಿದ್ದೇ ಹೆಚ್ಚು. ಓಂ ರಾವತ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ (Prabhas) ಅವರ ಅಭಿಮಾನಿಗಳು ‘ಆದಿಪುರುಷ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು.
ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಲಿಲ್ಲ. ರಾಮಾಯಣದ ಕಥೆಯನ್ನು ಆಧರಿಸಿ ಈ ಸಿನಿಮಾದಲ್ಲಿ ಅನೇಕ ತಪ್ಪುಗಳು ಇವೆ ಎಂಬುದನ್ನು ಪ್ರೇಕ್ಷಕರು ಪತ್ತೆ ಹೆಚ್ಚಿದರು. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರಿಂದ ಸಿನಿಮಾದ ಕಲೆಕ್ಷನ್ ಮೇಲೆ ಪರಿಣಾಮ ಬೀರಿತು. ಆದರೆ ಅಚ್ಚರಿ ಎಂಬಂತೆ ಎರಡನೇ ವೀಕೆಂಡ್ನಲ್ಲಿ ‘ಆದಿಪುರುಷ್’ ಕಲೆಕ್ಷನ್ ಕೊಂಚ ಸುಧಾರಿಸಿದೆ. ಜೂನ್ 24ರಂದು ಹಲವು ಕಡೆಗಳಲ್ಲಿ ಹೌಸ್ಫುಲ್ ಆಗಿದೆ.
ಎರಡನೇ ವೀಕೆಂಡ್ನಲ್ಲಿ ‘ಆದಿಪುರುಷ್’ ಸಿನಿಮಾ ಸಂಪೂರ್ಣವಾಗಿ ತನ್ನ ಆಟ ನಿಲ್ಲಿಸಲಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಮೊದಲ ವಾರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದೇ ಇರುವವರು 2ನೇ ವೀಕೆಂಡ್ನಲ್ಲಿ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಇದರಿಂದ ಜೂನ್ 24ರಂದು ಈ ಸಿನಿಮಾದ ಕಲೆಕ್ಷನ್ ಸ್ವಲ್ಪ ಏರಿಕೆ ಆಗಿದೆ. ಭಾನುವಾರ (ಜೂನ್ 25) ಕೂಡ ಇದೇ ರೀತಿ ಹೌಸ್ಫುಲ್ ಆದರೆ ಚಿತ್ರದ ಟೋಟಲ್ ಗಳಿಕೆ ಹೆಚ್ಚಾಗಲಿದೆ.
ಹೈದರಾಬಾದ್ನಲ್ಲಿ ಶನಿವಾರ ಸಿಕ್ಕಾಪಟ್ಟೆ ಮಳೆ ಸುರಿದಿದೆ. ಮಳೆಯ ರಭಸಕ್ಕೆ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಟ್ರಾಫಿಕ್ ಸವಾರರು ತುಂಬ ಸಮಸ್ಯೆ ಎದುರಿಸಿದ್ದಾರೆ. ಅಚ್ಚರಿ ಏನೆಂದರೆ ಈ ಪರಿ ಮಳೆಯ ನಡುವೆಯೂ ‘ಆದಿಪುರುಷ್’ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್ಫುಲ್ ಆಗಿದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಜನರು ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಇನ್ನೂ ಅನೇಕರು ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡುವುದಕ್ಕಾಗಿ ಕಾದಿದ್ದಾರೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಆದಿಪುರುಷ್’ ಚಿತ್ರ ಒಟಿಟಿಗೆ ಬರಲಿದೆ. ಆದರೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.
‘ಆದಿಪುರುಷ್’ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ 268 ಕೋಟಿ ರೂಪಾಯಿ ಮಾಡಿದೆ. ವಿಶ್ವಾದ್ಯಂತ ಇದರ ಗಳಿಕೆ 386 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ಬಜೆಟ್ ದುಬಾರಿ ಆಗಿರುವುದರಿಂದ ಚಿತ್ರಮಂದಿರದಲ್ಲಿ ಆಗಿರುವ ಈ ಕಲೆಕ್ಷನ್ ತೃಪ್ತಿದಾಯಕವಾಗಿಲ್ಲ. ಪ್ರಭಾಸ್ ಅವರು ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಅವರು ನಟಿಸಿದ್ದಾರೆ. ರಾವಣನಾಗಿ ಸೈಫ್ ಅಲಿ ಖಾನ್, ಲಕ್ಷ್ಮಣನಾಗಿ ಸನ್ನಿ ಸಿಂಗ್, ಆಂಜನೇಯನಾಗಿ ದೇವದತ್ತ ನಾಗೆ ಅಭಿನಯಿಸಿದ್ದಾರೆ. ಈ ಚಿತ್ರದಿಂದ ನಿರ್ದೇಶಕ ಓಂ ರಾವತ್ ಅವರು ಸಖತ್ ಟ್ರೋಲ್ಗೆ ಒಳಗಾಗಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.