ಮನೆ ಸುದ್ದಿ ಜಾಲ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ಮುಸ್ಕಾನ್ ನ್ನು ಹೊಗಳಿದ ಗೆ ಅಲ್ ಖೈದಾ ಮುಖ್ಯಸ್ಥ

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ಮುಸ್ಕಾನ್ ನ್ನು ಹೊಗಳಿದ ಗೆ ಅಲ್ ಖೈದಾ ಮುಖ್ಯಸ್ಥ

0

ಬೆಂಗಳೂರು: ಮಂಡ್ಯದಲ್ಲಿ ಹಿಜಾಬ್ ವಿರೋಧಿಸಿ ಜೈ ಶ್ರೀರಾಮ ಘೋಷಣೆಗೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಅವರನ್ನು ಉಗ್ರ ಸಂಘಟನೆಯ ಮುಖ್ಯಸ್ಥ ಅಯ್ಮಾನ್ ಅಲ್ ಜವಾಹಿರಿ ಹಾಡಿ ಹೊಗಳಿದ್ದಾರೆ.

ಮುಸ್ಕಾನ್ ಖಾನ್ ಅವರನ್ನು ಶ್ಲಾಘಿಸಿ 9 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿರುವ ಜವಾಹಿರಿ, ಹಿಜಾಬ್ ನಿಷೇಧದ ವಿರುದ್ಧ ಧ್ವನಿ ಎತ್ತುವಂತೆ ಭಾರತೀಯ ಮುಸ್ಲಿಮರಿಗೆ ಕರೆ ನೀಡಿದ್ದಾನೆ.

ವಿಡಿಯೋದಲ್ಲಿ ಭಾರತದ ಹಿಂದೂ ಪ್ರಜಾಪ್ರಭುತ್ವದಲ್ಲಿ ಮುಸ್ಲಿಮರು ಕಿರುಕುಳಕ್ಕೆ ಒಳಗಾಗಿದ್ದು, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಂಡ್ಯದ ಮುಸ್ಕಾನ್ ಭಾರತದ ಮಹಾನ್ ಮಹಿಳೆ(ನೋಬಲ್ ವುಮೆನ್ ಆಫ್ ಇಂಡಿಯಾ) ಎಂದ ಕರೆದಿದ್ದಾನೆ. ಅಲ್ಲದೆ ಮುಸ್ಕಾನ್ ನನ್ನು ಹೊಗಳಿ ಕವನ ಓದಿದ್ದಾನೆ .

ಸಾಮಾಜಿಕ ಮಾಧ್ಯಮದ ಮೂಲಕ ಮುಸ್ಕಾನ್ ಬಗ್ಗೆ ತಿಳಿದಿದೆ ಎಂದು ವಿಡಿಯೋದಲ್ಲಿ ಜವಾಹಿರಿ ಹೇಳಿದ್ದಾನೆ. ಈ ಸಹೋದರಿ ತಕ್ಬೀರ್ ಧ್ವನಿಯನ್ನು ಎತ್ತುವ ಮೂಲಕ ನನ್ನ ಹೃದಯವನ್ನು ಗೆದ್ದಿದ್ದಾಳೆ ಎಂದು ಉಗ್ರ ಹೇಳಿದ್ದಾನೆ. ಜವಾಹಿರಿಯ ಈ ವೀಡಿಯೊವನ್ನು ಅಲ್ ಖೈದಾದ ಅಧಿಕೃತ ಶಬಾಬ್ ಮೀಡಿಯಾ ಬಿಡುಗಡೆ ಮಾಡಿದೆ.