ಬೆಂಗಳೂರು: ಬೆಂಗಳೂರು ಮತ್ತು ಆಂಧ್ರ ಪ್ರದೇಶದ ವಿವಿಧ ನಗರಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ 16 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಒಂದೇ ವರ್ಷದಲ್ಲಿ 44 ಬೈಕ್ ಗಳನ್ನು ಕಳ್ಳತ ಮಾಡಿದ್ದಾರೆ. ಇದರಲ್ಲಿ ಹೆಚ್ಚಿನವು ಗೇರ್ ಲೆಸ್ ಸ್ಕೂಟರ್ ಗಳಾಗಿವೆ. ಪೊಲೀಸರು ಬಾಲಕರನ್ನು ಬಾಲಾಪರಾಧಿ ಗೃಹಕ್ಕೆ ಒಪ್ಪಿಸಿದ್ದಾರೆ.
ಇದಕ್ಕೂ ಮುನ್ನ ಪೊಲೀಸರು, ಪೋಷಕರು ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳ ಜೊತೆ ವಿಚಾರಣೆ ನಡೆಸಿದಾಗ, ಬೈಕ್ ನ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ.
ಇಬ್ಬರು ಬಾಲ ಆರೋಪಿಗಳಲ್ಲಿ ಓರ್ವ ಬಾಲಕ ನಗರದಲ್ಲಿ ತಾಯಿ ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದನು. ತಾಯಿ ಮತ್ತು ಸಹೋದರಿ ಯೊಂದಿಗೆ ಪ್ರತಿನಿತ್ಯ ಜಗಳ ಮಾಡುತ್ತಿದ್ದನು. ತಂಬಾಕು ಸೇವನೆಯ ಚಟವೂ ಈತನಿಗೆ ಇತ್ತು, ಹೀಗಾಗಿ ಈತನನ್ನು ಸರಿ ದಾರಿಗೆ ತರುವುದಾಗಿ, ಈತ ಶಿಸ್ತು ಕಲಿಯಲಿ ಎಂದು 2ವರ್ಷಗಳ ಹಿಂದೆ ತಾಯಿ ಮಗನನ್ನು ರಿಮ್ಯಾಂಡ್ ಹೋಮ್ ಗೆ ಸೇರಿಸಿದ್ದಳು.
ಈ ಬಲಕ ರಿಮ್ಯಾಂಡ್ ಹೋಮ್ನಲ್ಲಿ ಇದ್ದ ಇನ್ನೊಬ್ಬ ಹುಡುಗ ಜೊತೆ ಸೇರಿ ದ್ವಿಚಕ್ರ ವಾಹನಗಳ ಹ್ಯಾಂಡಲ್ ಮುರಿದು ಬೈಕ್ ಹೇಗೆ ಕಳ್ಳತನ ಮಾಡುವುದು, ಮತ್ತು ಎಲೆಕ್ಟ್ರಿಕಲ್ ಸರ್ಕ್ಯೂಟ್ ಅನ್ನು ಟ್ಯಾಂಪ ರಿಂಗ್ ಮಾಡಿ ಕಳ್ಳತನ ಮಾಡಿ ಓಡಿಸುವುದನ್ನು ಕಲಿತನು. ಇನ್ನು ಇನ್ನೊಬ್ಬ ಹುಡುಗನ ತಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾರೆ.
ಈ ಇಬ್ಬರೂ ಹುಡುಗರು ಹೈಸ್ಕೂಲ್ ಡ್ರಾಪ್ ಔಟ್ ಆಗಿದ್ದಾರೆ. ಹಗಲು ರಾತ್ರಿ ಗೊತ್ತುಗುರಿಯಿಲ್ಲದೆ ತಿರುಗಾಡುತ್ತಾರೆ. ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಮಂದ ಬೆಳಕಿನಲ್ಲಿರುವ ವಸತಿ ಪ್ರದೇಶಗಳಲ್ಲಿ ನಿಲ್ಲಿಸಿದ ಬೈಕ್ ಗಳನ್ನು ಕದಿಯುತ್ತಿದ್ದರು.
ಕದ್ದ ಬೈಕ್ ಗಳಲ್ಲಿ 18 ಬೈಕ್ ಅನ್ನು ತಲಾ 5,000 ರೂ. ಗಳಿಗೆ ಮಾರಿದ್ದಾರೆ. ಬ್ಯಾಂಕ್ ಗಳಿಗೆ ವಸೂಲಿ ಏಜೆಂಟ್ ಗಳಾಗಿ ಕೆಲಸ ಮಾಡುತ್ತಿದ್ದು, ಸಾಲವನ್ನು ಪಾವತಿಸದ ಕಾರಣ ಅವರ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಮಾರುತ್ತಿದ್ದೇವೆ ಎಂದು ಹೇಳಿಕೊಂಡು ಬೈಕ್ ಗಳನ್ನು ಮಾರುತ್ತಿದ್ದರು.
ಬೆಂಗಳೂರಿನ ಜೆಪಿ ನಗರ, ಬನಶಂಕರಿ, ಜಯನಗರ, ತಿಲಕನಗರ, ಮೈಕೋ ಲೇಔಟ್, ಎಚ್ ಎಎಲ್, ಕೆಆರ್ ಪುರಂ, ಬೆಳ್ಳಂದೂರು, ಎಚ್ ಎಸ್ಆರ್ ಲೇಔಟ್ ಮತ್ತು ಕಾಡುಗೋಡಿಯಲ್ಲಿ ಇವರಿಬ್ಬರು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.