ಮೈಸೂರು: ‘ಪ್ರಸಾದ್’ ಯೋಜನೆಯಡಿಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನವನ್ನು ಅಭಿವೃದ್ಧಿಪಡಿಸಲು ಹಾಗೂ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸುವ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಅನುಮೋದಿಸಿದೆ.
ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ ಸುತ್ತಲಿನ ಪ್ರಾಂಗಣ, ದೇವಿಕೆರೆ, ನಂದಿ ಪ್ರತಿಮೆ, ದೇವಿ ಪಾದ, ಪ್ರವಾಸಿಗರ ವೀಕ್ಷಣಾ ಪ್ರದೇಶಗಳ ಸುತ್ತಲಿನ ಅಭಿವೃದ್ಧಿಗೆ ಹಾಗೂ ಭಕ್ತರು ಸರದಿ ಸಾಲಿನಲ್ಲಿ ನಿಲ್ಲುವ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದನ್ನು ‘ಪ್ರಸಾದ್’ ಯೋಜನೆ ಒಳಗೊಂಡಿದೆ.
ಈ ಯೋಜನೆಯನ್ನು ಜೂನ್ 2014 ರಂದು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಕಟಿಸಿದ್ದು, ಇದೊಂದು ಧಾರ್ಮಿಕ ಗಮ್ಯಸ್ಥಾನಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರಚಾರ ಪಡಿಸುವ ಹಾಗೂ ಧೀರ್ಘಾವಧಿಯಲ್ಲಿ ಧಾರ್ಮಿಕ ಪವಿತ್ರ ಸ್ಥಳಗಳನ್ನು ಪುನರುಜ್ಜೀವನಗೊಳಿಸಿ ಆಧ್ಯಾತ್ಮಿಕ ಅನುಭವವನ್ನು ಯಾತ್ರಿಕರಿಗೆ ತೆರೆದಿಡುವ ಯೋಜನೆಯಾಗಿದೆ. ಈ ಯೋಜನೆಯಿಂದ ಯಾತ್ರ ಸ್ಥಳಗಳ ರಕ್ಷಣೆ, ಆರ್ಥಿಕ ಬೆಳವಣಿಗೆ ಪ್ರವಾಸಿಗರ ಹರಿವಿನ ಹೆಚ್ಚಳ, ಹಳೆಯ ಐತಿಹಾಸಿಕ ಕಟ್ಟಡಗಳ ಸಂರಕ್ಷಣೆ ಮತ್ತು ಅಭಿವೃದ್ಧಿ, ಪುರಾತನ ಸ್ಮಾರಕಗಳ ಹಾಗೂ ದೇವಾಲಯ ಸಂರಕ್ಷಣೆ, ಉದ್ಯೋಗ ಸೃಷ್ಠಿ, ಹೊಟೇಲ್, ರೆಸ್ಟೋರೆಂಟ್ ಮತ್ತು ಅಂಗಡಿಗಳ ಆದಾಯವನ್ನು ಹಾಗೂ ಉದ್ಯೋಗ ಸೃಷ್ಠಿ, ಸಾರಿಗೆ ವ್ಯವಸ್ಥೆ ಅಭಿವೃದ್ಧಿ ಇತ್ಯಾದಿ ಸಮಗ್ರ ಸಂಯೋಜಿತ ಅಭಿವೃದ್ಧಿಗೆ ಸಹಕಾರಿಯಾಗಿದೆ.
ಪ್ರಸಾದ್ ಯೋಜನೆಯ ಉದ್ದೇಶಗಳು:
ಧಾರ್ಮಿಕ ಪ್ರವಾಸೋದ್ಯಮದ ಮೂಲಕ ಹೆಚ್ಚು ಭಾರತೀಯ ಪ್ರವಾಸಿಗರು ಸಾಂಸ್ಕೃತಿಕ ಸಾಮಾಜಿಕ ಮತ್ತು ಆಧ್ಯಾತ್ಮಿಕ ಪ್ರಯೋಜನೆಗಳನ್ನು ಪಡೆಯುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಯಾತ್ರಿಕರ ಪ್ರಯಾಣದ ಅನುಭವವನ್ನು ಸುಧಾರಿಸುವುದು, ಸಮಗ್ರ ಅಭಿವೃದ್ದಿಯನ್ನು ಖಚಿತಪಡಿಸುವುದು, ತೀರ್ಥಯಾತ್ರೆಯನ್ನು ತಡೆರಹಿತ ಮತ್ತು ಮುಕ್ತಗೊಳಿಸುವುದು, ವಸತಿ ಸೌಕರ್ಯಗಳ ಗುಣಮಟ್ಟವನ್ನು ಸುಧಾರಿಸುವುದು, ಭಾರತದ ಶ್ರೀಮಂತ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಣೆ ಮಾಡುವುದು ಮತ್ತು ಉತ್ತೇಜಿಸುವುದನ್ನು ಒಳಗೊಂಡಿದೆ.
ಈ ಯೋಜನೆಯು ಬೃಹತ್ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ದೇಶದ ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುವುದು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯ ಮೂಲಕ ಸುಸ್ಥಿರ ಗ್ರಾಮೀಣ-ನಗರ ಸಂಪರ್ಕವನ್ನು ಉತ್ತೇಜಿಸುವುದು. ಭವಿಷ್ಯದಲ್ಲಿ ಪ್ರವಾಸಿಗರ ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಒಳಗೊಂಡಿರುವ ಎಲ್ಲಾ ಪಾಲುದಾರರ ಧನಾತ್ಮಕ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಈ ಯೋಜನೆಯು ಭಾರತದ ಆರ್ಥಿಕತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಹಾಗೂ ಭಾರತದ ಶ್ರೀಮಂತ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪರಂಪರೆ, ಸಂಸ್ಕೃತಿಯನ್ನು ಮತ್ತು ಸಂಪ್ರದಾಯಗಳನ್ನು ರಕ್ಷಿಸಿ ಪ್ರೋತ್ಸಾಹಿಸುತ್ತದೆ.
ದೇವಾಲಯದ ಮುಂಭಾಗದ ಸಭಾಂಗಣ ಹಾಗೂ ಶೌಚಾಲಯಗಳಿಗೆ ಹೊಸ ರೂಪ ನೀಡುವುದು, ಪಾದರಕ್ಷೆ ಸ್ಟ್ಯಾಂಡ್, ಕ್ಲಾಕ್ ರೂಂ ನಿರ್ಮಾಣ, ಮಹಿಷಾಸುರ ಪ್ರತಿಮೆ ಸುತ್ತಲಿನ ಪೊಲೀಸ್ ಬೂತ್ ಮಾಹಿತಿ ಕೇಂದ್ರ ಕಂಟ್ರೋಲ್ ರೂಂ, ಭಕ್ತರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ಘಟಕ, ಕಾರಂಜಿ ಕಲ್ಲಿನ ಮಾದರಿಯ ಪ್ರವೇಶ ದ್ವಾರ, ಕಲ್ಲಿನ ನಾಮಫಲಕಗಳು ಹಾಗೂ ಮೆಟ್ಟಿಲು ಮಾರ್ಗದ ದೇವಿಪಾದದ ಬಳಿ ಕಂಬಿಗಳ ಅಳವಡಿಕೆ ನೀರಿನ ಕೊಳವೆಗಳ ಅಳವಡಿಕೆ ಜೊತೆಗೆ ಸಾರ್ವಜನಿಕರ ಅನೌನ್ಸಮೆಂಟ್ ಇತ್ಯಾದಿ ವ್ಯವಸ್ಥೆಯನ್ನು ಅಭಿವೃದ್ದಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಅನುಮೋದನೆ ನೀಡಿದ್ದು, ಒಟ್ಟು ರೂ. 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿರುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.