ಮನೆ ಅಪರಾಧ ದುಷ್ಕರ್ಮಿಗಳಿಂದ ದ್ವಿಚಕ್ರ ವಾಹನಗಳಿಗೆ ಬೆಂಕಿ: ಸಂಪೂರ್ಣ ನಾಶ

ದುಷ್ಕರ್ಮಿಗಳಿಂದ ದ್ವಿಚಕ್ರ ವಾಹನಗಳಿಗೆ ಬೆಂಕಿ: ಸಂಪೂರ್ಣ ನಾಶ

0

ಯಳಂದೂರು: ಪಟ್ಟಣದ ಎಲೆಕೇರಿ ಬಡಾವಣೆಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಜರುಗಿದೆ.

Join Our Whatsapp Group


ಪಟ್ಟಣದ ೫ನೇ ವಾರ್ಡಿನ ಎಲೇಕೇರಿ ಬಡಾವಣೆಯ ನಿವಾಸಿ ಮಹೇಶನಾಯಕ್ ಎಂಬುವರಿಗೆ ಸೇರಿದ ಎರಡು ದ್ವಿಚಕ್ರ ವಾಹನಗಳನ್ನು ಮನೆಯ ಮುಂಭಾಗ ನಿಲಿಸಿದ್ದು, ಮಂಗಳವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಈ ಸಂದರ್ಭದಲ್ಲಿ ವಾಹನಗಳು ಬೆಂಕಿ ಹೊತ್ತಿ ಉರಿಯುತ್ತಿದ್ದಾಗ ಅಕ್ಕ ಪಕ್ಕದ ನಿವಾಸಿಗಳು ತಕ್ಷಣ ಮಾಲೀಕರಿಗೆ ವಿಷಯ ತಿಳಿಸಿ, ಬೆಂಕಿ ನಂದಿಸಲು ಮುಂದಾಗಿದ್ದು, ನಂತರ ಮಾಲೀಕ ಮಹೇಶ್ ಬಂದು ನೋಡುವಷ್ಟರಲ್ಲಿ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.

ಯಾರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಹೋಗಿರಬಹುದು ಎಂದು ದೂರು ನೀಡಿದ್ದು, ಈ ಬಗ್ಗೆ ಯಳಂದೂರು ಪಟ್ಟಣ ಪೊಲೀಸ್ ಠಾಣೆಯ ಸಬ್‌ ಇನ್ಸ್ಪೆಕ್ಟರ್ ಚಂದ್ರಹಾಸನಾಯಕ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.