ಮೈಸೂರು: ಮಣಿಪುರದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜನಾಂಗೀಯ ಹತ್ಯೆಗಳು ಮತ್ತು ಗಲಭೆಗಳನ್ನು ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಕೇಂದ್ರ ಸಮಿತಿಯು ಅಖಿಲ ಭಾರತ ಪ್ರತಿಭಟನಾ ದಿನವನ್ನು ಘೋಷಿಸಿದ್ದ ಹಿನ್ನೆಲೆಯಲ್ಲಿ ಇಂದು ನಗರದ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಕಳೆದ 2 ತಿಂಗಳುಗಳಿಂದ ಮಣಿಪುರದಲ್ಲಿ ಆರಂಭವಾದ ಕೋಮುವಾದಿ ಹತ್ಯೆಗಳು ಮತ್ತು ಗಲಭೆಗಳು ಈಗಲೂ ಮುಂದುವರೆಯುತ್ತಿದೆ. ಇದರ ಪರಿಣಾಮವಾಗಿ ಅಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನೂರಾರು ಜನ ಗಲಭೆಗಳಲ್ಲಿ ಪ್ರಾಣ ಕಳೆದುಕೊಂಡರೆ ಸಾವಿರಾರು ಜನರು ಎಲ್ಲವನ್ನೂ ಕಳೆದುಕೊಂಡು ಸ್ಥಳಾಂತರಗೊಂಡಿದ್ದಾರೆ. ವಾಸ್ತವದಲ್ಲಿ ಮಣಿಪುರ ಹೊತ್ತಿ ಉರಿಯುತ್ತಿದೆ.
ಕೇಂದ್ರ ಬಿಜೆಪಿ ಹಾಗೂ ಮಣಿಪುರ ರಾಜ್ಯ ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ತಾರತಮ್ಯ ನೀತಿಗಳಿಂದ, ಮೀಸಲಾತಿ ಹಾಗೂ ಅರಣ್ಯಗಳ ಮೇಲಿನ ಹಕ್ಕುಗಳ ಕುರಿತು ಒಡೆದು ಆಳುವ ರೀತಿಯಲ್ಲಿ ಬಿಜೆಪಿ ಸರ್ಕಾರವು ಕೈಗೊಂಡ ತಪ್ಪು ನೀತಿಗಳಿಂದಲೇ ಈ ಹಿಂಸಾಚಾರವು ಉಲ್ಬಣಗೊಳ್ಳುತ್ತಿವೆ. ಈವರೆಗೆ ಪ್ರಧಾನಮಂತ್ರಿಗಳು ಸಹ ಈ ಕುರಿತು ಒಂದೇ ಒಂದು ಮಾತು ಆಡಿಲ್ಲದಿರುವುದು ಅತ್ಯಂತ ದುರಾದೃಷ್ಟಕರವಾಗಿದೆ. ಮಣಿಪುರ ಹೊತ್ತಿ ಉರಿಯುತ್ತಿದ್ದಾಗ ಪ್ರಧಾನಿಗಳು ಕರ್ನಾಟಕದ ಚುನಾವಣಾ ರೋಡ್ ಶೋಗಳಲ್ಲಿ ಇತ್ತೀಚಿಗೆ ಅಮೇರಿಕಾದಲ್ಲಿ ವ್ಯಾಪಾರಿ ಪ್ರವಾಸದಲ್ಲಿ ತೊಡಗಿದ್ದರು ಎಂಬುದು ಖಂಡನೀಯ.
ಮೈತೇಯಿ ಹಾಗೂ ಕುಕಿ ಜನಾಂಗದ ನಡುವೆ ಭಾತೃ ಹಂತಕ ಹಿಂಸಾಚಾರವು ನಡೆಯುತ್ತಿದ್ದು, ಕೇಂದ್ರ ಮತ್ತು ಮಣಿಪುರ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಪಕ್ಷವೇ ಆಡಳಿತದಲ್ಲಿದ್ದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಮಣಿಪುರದಲ್ಲಿ ಶಾಂತಿ ನೆಲೆಸಲು ಜನಜೀವನ ಮೊದಲಿನ ಸ್ಥಿತಿಗೆ ಬರಲು ಕ್ರಮ ಕೈಗೊಳ್ಳುವ ಬದಲು ಜನರ ಜೀವನದೊಂದಿಗೆ ಆಟವಾಡುವ ಮನಸ್ಥಿತಿ ಪ್ರದರ್ಶನ ಮಾಡುತ್ತಿವೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಈ ನಡವಳಿಕೆಯನ್ನು ನಾವು ಅತ್ಯಂತ ಉಗ್ರವಾಗಿ ಖಂಡಿಸುತ್ತಾ, ಸರ್ಕಾರದ ಒಡೆದು ಆಳುವ ನೀತಿಗೆ ದಾಳವಾಗದ ಮಣಿಪುರದ ಎರಡು ಜನಾಂಗಗಳ ದುಡಿಯುವ ಜನತೆ ತಮ್ಮ ಒಗ್ಗಟ್ಟನ್ನು ಕಾಪಾಡಿಕೊಂಡು, ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಬೇಕಾದ ಐಕ್ಯತೆ ಎತ್ತಿ ಹಿಡಿಯಲು ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷ ಕರೆ ನೀಡಿದೆ.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಜಿಲ್ಲಾ ಮುಖಂಡರಾದ ಚಂದ್ರಶೇಖರ ಮೇಟಿ, ಸಂಧ್ಯಾ ಪಿ.ಎಸ್, ಸೀಮಾ ಜಿ ಎಸ್, ಯಶೋಧರ್, ಹರೀಶ್, ಸುಮಾ, ಸುಭಾಷ್, ಚಂದ್ರಕಲಾ, ಆಸೀಯಾ ಬೇಗಂ ಸೇರಿದಂತೆ ಇತರರು ಭಾಗವಹಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.