ಚೆನ್ನೈ: ದೇವಸ್ಥಾನಗಳ ಅರ್ಚಕರಾಗಿ ಯಾವುದೇ ಜಾತಿ/ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ನೇಮಕ ಮಾಡಬಹುದು ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅರ್ಚಕರ ನೇಮಕಾತಿಯು ಜಾತ್ಯಾತೀಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಅರ್ಚಕರ ಹುದ್ದೆಗೆ ನೇಮಕಾತಿ ಮಾಡುವ ಸಂದರ್ಭದಲ್ಲಿ ವಂಶಪಾರಂಪರ್ಯದ ಹಕ್ಕು ಕೇಳಲಾಗದು ಎಂದು ನ್ಯಾ.ಎನ್.ಆನಂದ್ ವೆಂಕಟೇಶ್ ಅವರಿದ್ದ ಪೀಠ ಹೇಳಿದೆ.
ಅಲ್ಲದೇ ದೇವಸ್ಥಾನದ ಅರ್ಚಕರಾಗಿ ನೇಮಕಗೊಳ್ಳುವ ವ್ಯಕ್ತಿಗೆ ಇರಬೇಕಾದ ಅರ್ಹತೆ ಒಂದೇ. ಅದು ದೇವಸ್ಥಾನದ ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸರಿಯಾಗಿ ತಿಳಿದಿರಬೇಕು. ಅಂತಹ ಯಾವುದೇ ವ್ಯಕ್ತಿಯನ್ನು ಜಾತಿ/ಪಂಗಡ ಪರಿಗಣಿಸದೇ ಅರ್ಚಕರಾಗಿ ನೇಮಕ ಮಾಡಬಹುದು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.
ಅಲ್ಲದೇ ದೇವಸ್ಥಾನಗಳಿಗೆ ವಂಶಪಾರಂಪರ್ಯವಾಗಿ ಬಂದವರನ್ನೇ ಅರ್ಚಕರಾಗಿ ನೇಮಕ ಮಾಡಬೇಕು, ಇತರೆ ಜಾತಿಯವರನ್ನು ನೇಮಕ ಮಾಡಬಾರದು ಎಂದು ಉಲ್ಲೇಖಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ತನ್ನ ತೀರ್ಪಿಗೆ ಪೂರಕವಾಗಿ ಸುಪ್ರೀಂಕೋರ್ಟ್ ನ ಹಲವು ತೀರ್ಪುಗಳನ್ನು ಉಲ್ಲೇಖಿಸಿದೆ.
ಪ್ರಕರಣದ ಹಿನ್ನೆಲೆ : ತಮಿಳುನಾಡಿನ ಸೇಲಂ ಜಿಲ್ಲೆಯ ಶ್ರೀ ಸುಗುವಣೇಶ್ವರ ದೇವಸ್ಥಾನಕ್ಕೆ ಅರ್ಚಕರು/ ಸ್ಥಾನಿಕ ಹುದ್ದೆಗೆ ನೇಮಕಾತಿ ಮಾಡುವ ಸಂಬಂಧ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ನಿಯಮ ಬಾಹಿರವಾಗಿ ಅರ್ಚಕರ ನೇಮಕಾತಿಗೆ ಮುಂದಾಗಿದ್ದಾರೆ. ವಂಶಪಾರಂಪರ್ಯವಾಗಿ ತಾವು ದೇವಸ್ಥಾನದ ಅರ್ಚಕರಾಗಿದ್ದು, ತಮ್ಮನ್ನು ಅರ್ಚಕ ಹುದ್ದೆಗೆ ಪರಿಗಣಿಸದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.