ಮನೆ ರಾಜ್ಯ ತಾಂತ್ರಿಕ ದೋಷ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ತಾಂತ್ರಿಕ ದೋಷ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

0

ಮಂಡ್ಯ: ತಾಂತ್ರಿಕ ದೋಷದಿಂದ ರೆನಾಲ್ಡ್ ಡಸ್ಟರ್ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

Join Our Whatsapp Group

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಪಿರಾನ್ ಎಂಬವರ ರೆನಾಲ್ಡ್ ಡಸ್ಟರ್ ಕಾರು ಹೊತ್ತಿ ಉರಿದಿದೆ.

ಮಕ್ಕಳ ಜೊತೆ ಮೈಸೂರಿಗೆ ತೆರಳುತ್ತಿದ್ದ ಪಿರಾನ್ ಶ್ರೀರಂಗಪಟ್ಟಣದ ಗೌರಿಪುರ ಗೇಟ್ ಬಳಿ ಬರುತ್ತಿದ್ದಂತೆ ಕಾರಿನ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಾರನ್ನು ನಿಲ್ಲಿಸಿದ ಪಿರಾನ್ ಕಾರಿನಲ್ಲಿದ್ದ ಮಕ್ಕಳನ್ನು ತಕ್ಷಣವೇ ಸ್ಥಳೀಯರು ಕೆಳಕ್ಕಿಳಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಅಗಮಿಸಿ ಬೆಂಕಿ ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.