ಮನೆ ಜ್ಯೋತಿಷ್ಯ ಮುಂದಿನ ದಿನಗಳಲ್ಲಿ  ಜನಪ್ರಳಯ ಸಂಭವಿಸುವ ಸಾಧ್ಯತೆ: ಕೋಡಿಮಠದ ಶ್ರೀ ಭವಿಷ್ಯ

ಮುಂದಿನ ದಿನಗಳಲ್ಲಿ  ಜನಪ್ರಳಯ ಸಂಭವಿಸುವ ಸಾಧ್ಯತೆ: ಕೋಡಿಮಠದ ಶ್ರೀ ಭವಿಷ್ಯ

0

ಹುಬ್ಬಳ್ಳಿ: ಪ್ರಕೃತಿ ಮಾತೆ ಮುನಿದಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಜಲಪ್ರಳಯವೇ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Join Our Whatsapp Group

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ರಾಜ್ಯದಲ್ಲಿ ಸಾಕಷ್ಟು ಮಳೆ ಬಂದು ಜಲಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕ ಮಟ್ಟದಲ್ಲೂ ದುರಂತ ಆಗುವುದಿದೆ. ಜಗತ್ತಿಗೆ ಮೂರು ಗಂಡಾಂತರ ಕಾದಿದ್ದು ಒಂದೆರಡು ದೇಶಗಳೇ ಮುಚ್ಚಿ ಹೋಗಲಿವೆ ಎಂದಿದ್ದಾರೆ.

ಇನ್ನು ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದ್ದು ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲದಿದ್ದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ಸ್ವಾಮೀಜಿ ಹೇಳಿದ್ದಾರೆ.

ಶಿವಾನಂದ ಶಿವಯೋಗಿ ಸ್ವಾಮೀಜಿ ಕನ್ನಡ ನಾಡಿಗೆ ಇರುವ ಕೆಲ ಆಪತ್ತುಗಳ ಬಗ್ಗೆಯೂ ಭವಿಷ್ಯವಾಣಿ ನುಡಿದಿದ್ದು ಕೆಲ ಸಾವು ನೋವುಗಳು ಆಗುತ್ತವೆ, ದೈವ ಕೃಪೆಯಿಂದ ಜನರು ಪಾರಾಗಬಹುದು ಎಂದಿದ್ದಾರೆ.

ಭಾರತದಲ್ಲಿ ಒಂದು ದುರ್ಘಟನೆ ಆಗಲಿದ್ದು ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ. ಜಗತ್ತಿನ ಸಾಮ್ರಾಟರು ತಲ್ಲಣ ಆಗ್ತಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾಳೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಕೋಡಿಮಠದ ಶ್ರೀಗಳು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದಿದ್ದಾರೆ.