ಧಾರವಾಡ: ಸಿದ್ದರಾಮಯ್ಯನವರೂ ಸಹ ಲುಂಗಿ ಲೀಡರ್ ಅನ್ನೋದನ್ನ ಕಾಂಗ್ರೆಸ್ ಪಕ್ಷ ಮರೆಯಬಾರದು. ನಾವೂ ಸಹ ಅದೇ ಭಾಷೆಯಲ್ಲಿ ಉತ್ತರ ಕೊಡಬಹುದು. ಆದರೆ ಆ ಲೆವೆಲ್ ಗೆ ಇಳಿಯಲ್ಲ ಎಂದು ಪಂಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷ ಬಳಸಿರುವ ಪಂಚೆ ಭಾಷೆಗೆ ನನ್ನ ಬಳಿ ಉತ್ತರ ಇಲ್ಲ ಅಂತ ಅಲ್ಲ, ನನ್ನ ಬಾಯಲ್ಲಿ ಉತ್ತರ ಇದೆ, ಆದರೆ ಆ ರೀತಿಯ ಅಸಭ್ಯ ಭಾಷೆ ಬಳಸೋದು ಯಾವ ಕಾಲಕ್ಕೂ ಸರಿ ಅಲ್ಲ. ನೇರವಾಗಿ ರಾಜಕಾರಣದಲ್ಲಿ ಡೇ ಟು ಡೇ ಬೇಸಿಸ್ ನಲ್ಲಿ ಸಂಬಂಧವಿಟ್ಟುಕೊಳ್ಳದ, ಸಂಘಟನೆಯಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳ ಬಗ್ಗೆ ಈ ರೀತಿಯ ಭಾಷೆ ಬಳಸಿದ ಕಾಂಗ್ರೆಸ್ ಪಕ್ಷಕ್ಕೆ ಜನರೇ ಉತ್ತರ ಕೊಡ್ತಾರೆ ಎಂದು ಜೋಶಿ ಕಿಡಿಕಾರಿದರು.
ಚುವಾವಣೆಯ ಸಂದರ್ಭದಲ್ಲಿ ಬೇಷರತ್ ಎಂಬಂತೆ ಬಿಂಬಿಸಿ ಭಾಗ್ಯಗಳನ್ನು ಘೋಷಿಸಿದ ಕಾಂಗ್ರೆಸ್ ಇವತ್ತು ಉಲ್ಟಾ ಹೊಡೆಯುತ್ತಿದೆ. ಇದರಿಂದ ಕರ್ನಾಟಕದ ಜನತೆ ಕೂಡ ತೀವ್ರ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಈ ದುರಹಂಕಾರ ಮತ್ತು ದುರಾಡಳಿತವನ್ನ ವಿರೋಧಿಸಿ ನಾವು ಜುಲೈ 4 ರಂದು ಪ್ರತಿಭಟನೆ ಮಾಡಲಿದ್ದೇವೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.