ಮನೆ ರಾಜ್ಯ ನನಗೆ ಮಾತ್ರ ನೋಟಿಸ್ ಕೊಟ್ಟಿರುವ ಉದ್ದೇಶವಾದರೂ ಏನು? : ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ

ನನಗೆ ಮಾತ್ರ ನೋಟಿಸ್ ಕೊಟ್ಟಿರುವ ಉದ್ದೇಶವಾದರೂ ಏನು? : ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ

0

ಬೆಂಗಳೂರು: ನನಗೆ ಮಾತ್ರ ನೋಟಿಸ್ ಕೊಟ್ಟು ಉಳಿದವರಿಗೆ ಯಾಕೆ ಕೊಟ್ಟಿಲ್ಲ? ಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆ ಎಂಬುದು ನನಗೆ ಗೊತ್ತಾಗಿದೆ ನೋಟೀಸ್ ಬಂದ ಮೇಲೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ರಾಜ್ಯ ನಾಯಕರ ವಿರುದ್ಧ ಮತ್ತೆ ಕಿಡಿ ಕಾರಿದ್ದಾರೆ.

Join Our Whatsapp Group

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ನೋಟಿಸ್ ಗೆ ಹೆದರಿ ಬಾಯಿಮುಚ್ಚಿಕೊಂಡು ಸುಮ್ಮನಿರುತ್ತೇನೆ ಎಂದು ಕೊಂಡರೆ ಅದು ಅವರ ಭ್ರಮೆ ಎಂದು ತಿರುಗೇಟು ನೀಡಿದರು.

ನಾನು ಯಾರಿಗೂ ಹೆದರುವವನಲ್ಲ ಪಕ್ಷ ವಿರೋಧಿ ಚಟುವಟಿಕೆ ನಡಿಸಿಲ್ಲ, ಪಕ್ಷದಲ್ಲಿ ನಡೆದಿರುವ ಬೆಳವಣಿಗೆಗಳ ಕುರಿತು ಮಾಧ್ಯಮದ ಮುಂದೆ ಹೇಳಿದ್ದೇನೆ. ನನಗೆ ಮಾತ್ರ ನೋಟಿಸ್ ಕೊಟ್ಟಿರುವ ಉದ್ದೇಶವಾದರೂ ಏನು? ಉಳಿದವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ? ಯಡಿಯೂರಪ್ಪನವರ ಪರವಾಗಿ ಮಾತನಾಡಿದ್ದಕ್ಕೆ ನನ್ನನ್ನು ಗುರಿಯಾಗಿಟ್ಟುಕೊಂಡು ನೋಟಿಸ್ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷರು 11 ಮಂದಿಗೆ ನೋಟಿಸ್ ನೀಡಿದ್ದೇವೆ ಎಂದು ಬಳಿಕ ರವಿಕುಮಾರ್ ನನ್ನೊಬ್ಬನಿಗೆ ನೋಟಿಸ್ ಕೊಟ್ಟಿದ್ದೇವೆ ಎಂದು ಹೇಳುವುದರ ಮರ್ಮವೆನೆಂದು ಪ್ರಶ್ನಿಸಿದರು.

 ಕರ್ನಾಟಕದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿದ್ದು ಯಡಿಯೂರಪ್ಪ ಅವರೊಬ್ಬ ಅಗ್ರಮಾನ್ಯ ನಾಯಕ ಸೈಕಲ್ ಹೊಡೆದು ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಅಂಥವರನ್ನು ಷಡ್ಯಂತ್ರ ಮಾಡಿ ಅವಮಾನಿಸಿ ಅಗೌರವವಾಗಿ ನಡೆಸಿಕೊಂಡು ಅಧಿಕಾರದಿಂದ ಕೆಳಗಿಳಿಸಿದರು. ಯಡಿಯೂರಪ್ಪ ನಮ್ಮ ನಾಯಕರು, ನನ್ನ ಮೂಲಕ ಹೇಳಿಕೆ ಕೊಟ್ಟಿದ್ದಾರೆ ಎಂದು ಕೆಲವರು ಮಾತನಾಡುತ್ತಾರೆ. ಅಂತಹ ಕೀಳು ಮಟ್ಟದ ರಾಜಕಾರಣ ಅವರೆಂದೂ ಮಾಡಿಲ್ಲ ಅವಮಾನ ಮಾಡಿದರು ಗೌರವದಿಂದ ರಾಜೀನಾಮೆ ಕೊಟ್ಟರು ಎಂದು ಹೇಳಿದರು.