ಮನೆ ರಾಜ್ಯ ವಿರೋಧ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ

ವಿರೋಧ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆ

0

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Join Our Whatsapp Group

ರಾಜ್ಯ ಬಿಜೆಪಿ, ಇಂದು ಮಧ್ಯಾಹ್ನ ನಂತರ ಶಾಸಕಾಂಗ ಸಭೆ ಕರೆಯಲು ಮುಂದಾಗಿತ್ತು. ಆದರೆ ದೆಹಲಿಯಿಂದ ಬಂದಿಳಿದ ಬಿಎಸ್​ವೈ ಸುದ್ದಿಗಾರರೊಂದಿಗೆ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದಿದ್ದಾರೆ.

ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗಿದ್ದು ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ.

ಏರ್ ಪೋರ್ಟ್’​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ “ನಾನು ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ನಡ್ಡಾ ಜೊತೆ ಸುಧಿರ್ಗ ಚರ್ಚೆ ಮಾಡಿದ್ದೇನೆ. ನಾಳೆ ವಿರೊಧ ಪಕ್ಷದ ನಾಯಕನನ್ನ ರಾಷ್ಟ್ರೀಯ ನಾಯಕರು ಘೊಷಣೆ ಮಾಡಲಿದ್ದಾರೆ” ಎಂದಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ​ನ ನಾಯಕರು ಅನೇಕ ಬಾರಿ ಬಿಜೆಪಿಯನ್ನು ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಕುರಿತಾಗಿ ಟೀಕೆ ಮಾಡಿದ್ದಾರೆ.