ಸುಪ್ರೀಂ ಕೋರ್ಟ್ ಗೆ ಐವರು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳ (ಎಎಜಿ) ನೇಮಕಾತಿ ಸೇರಿದಂತೆ ಒಟ್ಟು 15 ಮಂದಿ ಎಎಜಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರವು ಸೋಮವಾರ ಅಧಿಸೂಚನೆ ಪ್ರಕಟಿಸಿದೆ.
ಕರ್ನಾಟಕ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠಕ್ಕೆ ಐವರು, ಕಲಬುರ್ಗಿ ಪೀಠಕ್ಕೆ ಮೂವರು ಮತ್ತು ಧಾರವಾಡ ಪೀಠಕ್ಕೆ ಇಬ್ಬರು ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳನ್ನು ನೇಮಕ ಮಾಡಲಾಗಿದೆ. ಒಟ್ಟು 15 ಎಎಜಿಗಳ ಪೈಕಿ ಏಕೈಕ ಮಹಿಳಾ ವಕೀಲೆ ಎಎಜಿಯಾಗಿ ನೇಮಕಗೊಂಡಿದ್ದಾರೆ.
ವಕೀಲರಾದ ನಿಶಾಂತ್ ಪಾಟೀಲ್, ಮೊಹಮ್ಮದ್ ಅಲಿ ಖಾನ್, ಪ್ರತೀಕ್ ಛಡ್ಡಾ, ಅವಿಷ್ಕಾರ್ ಸಿಂಘ್ವಿ ಮತ್ತು ಅಮನ್ ಪನ್ವಾರ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಎಎಜಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾದ ನಿಖಿಲ್ ಗೋಯಲ್ ಅವರ ಸ್ಥಾನವನ್ನು ನಿಶಾಂತ್ ಪಾಟೀಲ್ ತುಂಬಲಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ಬೆಂಗಳೂರಿನ ಪ್ರಧಾನ ಪೀಠದಲ್ಲಿ ಎಎಜಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಹಂಗಾಮಿ ಅಧ್ಯಕ್ಷರಾಗಿರುವ ಎಸ್ ಎ ಅಹ್ಮದ್, ವಕೀಲರಾದ ಸಿ ಎಸ್ ಪ್ರದೀಪ್, ರೊಬೆನ್ ಜಾಕೋಬ್, ವಿ ಜಿ ಭಾನುಪ್ರಕಾಶ್, ಕಿರಣ್ ರೋಣ ಕಾರ್ಯನಿರ್ವಹಿಸಲಿದ್ದಾರೆ.
ಧಾರವಾಡ ಪೀಠದಲ್ಲಿ ಜೆ ಎಂ ಗಂಗಾಧರ ಮತ್ತು ಕೇಶವ ರೆಡ್ಡಿ, ಕಲಬುರ್ಗಿ ಪೀಠದಲ್ಲಿ ಮಲ್ಹಾರ ರಾವ್, ವೈ ಎಚ್ ವಿಜಯಕುಮಾರ್ ಹಾಗೂ ಅರ್ಚನಾ ಬಿ. ತಿವಾರಿ ಅವರು ಎಎಜಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕಾನೂನು ಇಲಾಖೆಯ ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.