ಹೊಸದಿಲ್ಲಿ: 2024ರ ಲಕ್ಷ್ಯವಿಟ್ಟು ಕೆಲಸ ಮಾಡಬೇಡಿ, 2047 ರ ವೇಳೆಗೆ ಹಲವಾರು ಕ್ಷೇತ್ರಗಳಲ್ಲಿ ಭಾರತದ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಕೆಲಸ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಸೋಮವಾರ ಸಚಿವರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಶತಮಾನ ಆಚರಿಸುವ 2047ರ ಅವಧಿಯನ್ನು ಪ್ರಧಾನಿ ಮೋದಿ ಅವರು ಅಮೃತ ಕಾಲ ಎಂದು ಬಣ್ಣಿಸಿದರು. ಮುಂದಿನ 25 ವರ್ಷಗಳಲ್ಲಿ ಅಂದರೆ 2047ರ ವೇಳೆಗೆ ಬಹಳಷ್ಟು ಬದಲಾವಣೆಗಳು ನಡೆಯಲಿದೆ. ಉನ್ನತ ಶಿಕ್ಷಣ ಪಡೆದ ಉದ್ಯೋಗಿಗಳ ಹೊರಹೊಮ್ಮುವಿಕೆಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಗೆ ಭಾರತ ಸಾಕ್ಷಿಯಾಗಲಿದೆ ಎಂದರು.
ವಿದೇಶಾಂಗ, ರಕ್ಷಣಾ ಮತ್ತು ರೈಲ್ವೆ ಸೇರಿದಂತೆ ವಿವಿಧ ಸಚಿವಾಲಯಗಳನ್ನು ಪ್ರತಿನಿಧಿಸುವ ಹಲವಾರು ಕಾರ್ಯದರ್ಶಿಗಳು ಸಭೆಯಲ್ಲಿ ಮಾತನಾಡಿದರು. ಎಲ್ಲಾ ಸಚಿವಾಲಯಗಳು ಮುಂದಿನ 25 ವರ್ಷಗಳ ಭಾರತದ ಅಭಿವೃದ್ಧಿ ಮಾರ್ಗದ ನಕ್ಷೆಯ ಬಗ್ಗೆ ಪ್ರೆಸೆಂಟೇಶನ್ ನೀಡಿದೆ.
ಸಭೆಯ ನಂತರ, ಪ್ರಧಾನಿ ಮೋದಿ ಅವರು ಭಾಗವಹಿಸಿದ ಸಚಿವರ ಚಿತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಸಚಿವ ಮಂಡಳಿಯೊಂದಿಗೆ ಫಲಪ್ರದ ಸಭೆ ನಡೆಯಿತು. ಅಲ್ಲಿ ನಾವು ವೈವಿಧ್ಯಮಯ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಬರೆದು ಕೊಂಡಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.