ಮನೆ ಅಪರಾಧ ಟಾಟಾ ಎಸ್ ಡಿಕ್ಕಿ: ಪಾದಚಾರಿ ಸಾವು

ಟಾಟಾ ಎಸ್ ಡಿಕ್ಕಿ: ಪಾದಚಾರಿ ಸಾವು

0

ಹುಣಸೂರು: ಟಾಟಾ ಎಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಾಚಾರಿ ಸಾವನ್ನಪ್ಪಿರುವ ಘಟನೆ ನಗರದ ಹೊಸ ಬಸ್ ಸ್ಟ್ಯಾಂಡ್ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದಿದೆ.          

Join Our Whatsapp Group

ತಾಲೂಕಿನ ಮಧುಗಿರಿ ಕೊಪ್ಪಲು ಗ್ರಾಮದ ನಿವಾಸಿ ಪುಟ್ಟಸ್ವಾಮಿಗೌಡ (80) ಸಾವನ್ನಪ್ಪಿದವರು.

ಈತ ಸ್ವಗ್ರಾಮದಿಂದ ಹುಣಸೂರಿಗೆ ಆಗಮಿಸಿದ್ದು, ಬಸ್ ನಿಲ್ದಾಣದಲ್ಲಿರುವ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದು ಪಕ್ಕದಲ್ಲಿದ್ದ ಮೆಡಿಕಲ್ ಸ್ಟೋರ್ ಇಂದ ಔಷಧಿ ಖರೀದಿಸಿ ರಸ್ತೆ ದಾಟಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕಲ್ಪತರು ಸರ್ಕಲ್ ಕಡೆಯಿಂದ ಬಂದ ಟಾಟಾ ಎಸ್ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಪುಟ್ಟಸ್ವಾಮಿ ಗೌಡರಿಗೆ ನಗರದ ವಿಕ್ರಮಾಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯ ಸಾವನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಧರ್ಮೇಂದ್ರ ಪರಿಶೀಲನೆ ನಡೆಸಿದರು. ಬಳಿಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಈ ಸಂಬಂಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಟಾಟಾ ಎಸ್ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ವಾಹನ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ .