ಮನೆ ಸುದ್ದಿ ಜಾಲ ಮೈಸೂರು: ಖಾಸಗಿ ಫೈನಾನ್ಸ್ ಕಂಪನಿಯ ಬಿಲ್ ಕಲೆಕ್ಟರ್ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

ಮೈಸೂರು: ಖಾಸಗಿ ಫೈನಾನ್ಸ್ ಕಂಪನಿಯ ಬಿಲ್ ಕಲೆಕ್ಟರ್ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

0

ಮೈಸೂರು: ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್(21) ಎಂಬಾತನ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ಕೊಳಗಟ್ಟ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಮಂಗಳವಾರ(ಜು.4) ಮ್ಯಾನೇಜರ್ ಕರೆಯುತ್ತಿದ್ದಾರೆಂದು ಮನೆಯಿಂದ ಹೋಗಿದ್ದ ಅರುಣ್, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಹುಡುಕಾಟ ಕುಟುಂಬಸ್ಥರು, ಸ್ನೇಹಿತರು ಹುಡುಕಾಟ ಆರಂಭಿಸಿದ್ದರು.

ಬಳಿಕ ಅರುಣ್​ ಶವ ಕೆರೆ ಬಳಿ ಸಿಕ್ಕಿದ್ದು, ಯಾರೋ ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.