ಮನೆ ರಾಜ್ಯ ರಾಜ್ಯಾದ್ಯಂತ ಇಂದಿನಿಂದ ನ್ಯಾಯಬೆಲೆ ಅಂಗಡಿಗಳು ಬಂದ್

ರಾಜ್ಯಾದ್ಯಂತ ಇಂದಿನಿಂದ ನ್ಯಾಯಬೆಲೆ ಅಂಗಡಿಗಳು ಬಂದ್

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದಿರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆ.ಜಿ ಅಕ್ಕಿ ಹಣವನ್ನು ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯ ಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ.  

Join Our Whatsapp Group

ರಾಜ್ಯದ ಒಟ್ಟು 20,000ಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಗಳನ್ನು ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧರಿಸಿದ್ದಾರೆ.        

ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಬೇಕು, ಖಾತೆಗೆ ಹಣ ಹಾಕುವ ಬದಲು 10 ಕೆ.ಜಿ ಬೇರೆ ದವಸಗಳನ್ನು ನೀಡಿ ಇಲ್ಲವೇ ಖಾತೆಗೆ ಹಣವನ್ನೇ ಹಾಕುವುದಾದರೆ ನಮಗೆ 10 ಕೆ.ಜಿ ಅಕ್ಕಿಯ ಕಮಿಷನ್ ನೀಡಿ ಎನ್ನುವ ಪಟ್ಟು ಹಿಡಿದಿದ್ದಾರೆ.           

ಜನರಿಗೆ 5 ಕೆಜಿಗೆ ಹಣ ನೀಡಿದರೆ, ನಮಗೆ ನಷ್ಟ ಆಗುತ್ತದೆ, ನಾವೇ 10 ಕೆಜಿಗೆ ಅಕ್ಕಿ ನೀಡಿದರೆ ನಮಗೆ ಕಮಿಷನ್ ಹೆಚ್ಚಾಗಿ ಸಿಗುತ್ತದೆ ಎಂದು ವೋಟ್ ಹಾಕಿದ್ವಿ. ಈಗ 5 ಕೆಜಿ ಅಕ್ಕಿ ಹಿಡಿದರೆ ಕಮಿಷನ್ ನಷ್ಟ ಆಗುತ್ತದೆ. ಇದನ್ನೇ ನಂಬಿಕೊಂಡಿರುವ ನಾವು ಹೇಗೆ ಜೀವನ ಮಾಡುವುದು ಎಂದು ನ್ಯಾಯ ಬೆಲೆ ವರ್ತಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.