ಮನೆ ಅಪರಾಧ ದಾಂಡೇಲಿ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರನಿಗೆ ಗಾಯ

ದಾಂಡೇಲಿ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರನಿಗೆ ಗಾಯ

0

ದಾಂಡೇಲಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರರೋರ್ವರು ಗಾಯಗೊಂಡ ಘಟನೆ ತಾಲ್ಲೂಕಿನ ದಾಂಡೇಲಿ ಹಳಿಯಾಳ ಹೆದ್ದಾರಿ ಕರ್ಕಾ ಸಮೀಪ ನಡೆದಿದೆ.

Join Our Whatsapp Group

ದಾಂಡೇಲಿ ನಗರದ ಬಂಗೂರನಗರದಲ್ಲಿರುವ ಸ್ಟಾಪ್ ಕ್ವಾಟ್ರಸ್ ನಿವಾಸಿಯಾಗಿದ್ದು, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿರುವ ಶಂಕರ್ ಪರಶುರಾಮ ಬಂಡಿವಡ್ಡರ ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಇವರು ಹಳಿಯಾಳ ಕಡೆಯಿಂದ ದಾಂಡೇಲಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕರ್ಕಾ ಹತ್ತಿರ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದು, ತಲೆಗೆ, ಕಾಲಿಗೆ ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ.

ಬಿದ್ದು ಒದ್ದಾಡುತ್ತಿದ್ದ ಇವರನ್ನು ಇದೇ ರಸ್ತೆಯಲ್ಲಿ ಬರುತ್ತಿದ್ದವರು ತಕ್ಷಣವೆ 108 ಆಂಬುಲೆನ್ಸಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿ, ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಮಾಹಿತಿಯನ್ನು ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.