ಮನೆ ರಾಜ್ಯ ಇ-ಸ್ವತ್ತು ಮಾಡಿಕೊಡಲು 25ಸಾವಿರ ಲಂಚ: ನಗರಸಭೆ ವಾರ್ಡ್ ಅಧಿಕಾರಿ ಲೋಕಾಯುಕ್ತ ಬಲೆಗೆ

ಇ-ಸ್ವತ್ತು ಮಾಡಿಕೊಡಲು 25ಸಾವಿರ ಲಂಚ: ನಗರಸಭೆ ವಾರ್ಡ್ ಅಧಿಕಾರಿ ಲೋಕಾಯುಕ್ತ ಬಲೆಗೆ

0

ಹಾಸನ: ನಗರಸಭೆ ವಾರ್ಡ್ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು 25 ಸಾವಿರ ಲಂಚ ಕೇಳಿದ್ದು, ಅದನ್ನು ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Join Our Whatsapp Group

ಲೋಕಾಯುಕ್ತ ಇನ್ಸ್‌ ಪೆಕ್ಟರ್ ಬಾಲು ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಅಧಿಕಾರಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಜೂ.28ರಂದು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಛೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಐಷಾರಾಮಿ ಕಾರು, ಆಸ್ತಿ ದಾಖಲೆಗಳ ಪತ್ರಗಳನ್ನು ವಶಪಡಿಸಿಕೊಂಡಿದ್ದರು.