ಮನೆ ರಾಜ್ಯ ಮೈಷುಗರ್ ಕಾರ್ಖಾನೆ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ

ಮೈಷುಗರ್ ಕಾರ್ಖಾನೆ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ

ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ:ಶಿವಾನಂದ ಎಸ್.ಪಾಟೀಲ್

0

ಮಂಡ್ಯ:ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ತಿಳಿಸಿದರು.

Join Our Whatsapp Group


ಅವರು ಮೈಷುಗರ್ ಕಾರ್ಖಾನೆಯ 2023-24 ನೇ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಗಿದೆ.ಇಂದು ನಾಳೆ 1500 ರಿಂದ 2000 ಟನ್ ಕಬ್ಬು ನುರಿಸಲಾಗುವುದು.
ಕಾಲಕ್ರಮ ಮೂರು ಸಾವಿರ ಟನ್ ನಿಂದ ಐದು ಸಾವಿರ ಟನ್ ವರೆಗೂ ಕಬ್ಬು ನುರಿಯುವ ಕೆಲಸ ನಡೆಯಲಿದೆ ಎಂದರು.
ರೈತರಿಗೆ ಎಫ್ಆರ್ ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2800 ರೂ ನೀಡಲಾಗಿದೆ ಎಂದರು.
ಪ್ರಸಕ್ತ ಹಂಗಾಮಿನಲ್ಲಿ 3 ಲಕ್ಷ ಟನ್ ಕಬ್ಬು ನುರಿಸುವ ಗುರಿ ಇದೆ.ರೈತರು ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವಂತೆ ಮನವಿ ಮಾಡಿದರು.ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ.ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ.ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ ಎಂದರು.
ಮೈಶುಗರ್ ಕಾರ್ಖಾನೆ ಖಾಸಗಿಕರಣಕ್ಕೆ ಜನರ ವಿರೋಧ ಇತ್ತು. ನಮ್ಮ ಸರ್ಕಾರ ಮಾತು ಕೊಟ್ಟಂತೆ ಕಾರ್ಖಾನೆ ನಡೆಯುತ್ತೆ.ಹೆಚ್ಚು ಕಬ್ಬು ಅರೆಯುವ ಕಾರ್ಯ ನಡೆಯುತ್ತೆ. ಇನ್ನೂ ಯಾವತ್ತು ಈ ಕಾರ್ಖಾನೆ ಮುಚ್ಚಲ್ಲ.ಇನ್ನೂ ಕಾರ್ಖಾನೆ ಸಮಸ್ಯೆ ಇರಲ್ಲ.ಹೊಸ ಕಾರ್ಖಾನೆ ಕೂಡ ಆಗುತ್ತೆ ಎಂದು ಹೇಳಿದರು.
ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿ ಕಬ್ಬು ಅರೆಯುವಿಕೆ ಪ್ರಾರಂಭವಾಗಿರುವುದಕ್ಕೆ ನನ್ನ ಸ್ವಾಗತವಿದೆ ಎಂದರು.
ಮೈಷುಗರ್ ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ.ಅವುಗಳನ್ನ ಸರಿಪಡಿಸಿಕೊಂಡು ಹೋದ್ರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ.40 ಕೋಟಿ ಕರೆಂಟ್ ಬಿಲ್ ಬಾಕಿಯ ಬಗ್ಗೆ ಕೇಂದ್ರದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನಾ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕರಾದ ಗಣಿಗ ರವಿಕುಮಾರ್,ರಮೇಶ ಬಂಡಿಸಿದ್ದೇಗೌಡ,ಜಿಲ್ಲಾಧಿಕಾರಿ ಡಾ.ಕುಮಾರ್, ಕಾರ್ಖಾನೆ ತಾಂತ್ರಿಕ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪಸಾಹೇಬ್ ಸೇರಿದಂತೆ ರೈತ ನಾಯಕರು ಭಾಗಿಯಾಗಿದ್ದರು.