ಮನೆ ರಾಜ್ಯ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿದ್ದ ಭಾಗ್ಯಲಕ್ಷಿ ಯೋಜನೆಗೆ ಕೊಕ್

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿದ್ದ ಭಾಗ್ಯಲಕ್ಷಿ ಯೋಜನೆಗೆ ಕೊಕ್

0

ಬೆಂಗಳೂರು : ಇಂದು ಸಿ.ಎಂ. ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬಿ.ಎಸ್.ವೈ ಅವರಿಂದ ಜಾರಿಗೊಳಿಸಿದ್ದ ಭಾಗ್ಯಲಕ್ಷಿ ಯೋಜನೆಯನ್ನು  ಕೈ ಬಿಡಲಾಗಿದೆ.

Join Our Whatsapp Group

ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಭಾಗ್ಯಲಕ್ಷಿ ಯೋಜನೆಯನ್ನುಮುಂದುವರೆಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಯೋಜನೆ ಬಗ್ಗೆ ಚಕಾರ ಎತ್ತಿಲ್ಲ. ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣುಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದರು.

18 ವರ್ಷ ಪೂರ್ಣಗೊಂಡ ನಂತರ ಉನ್ನತ ವಿದ್ಯಾಭ್ಯಾಸಕ್ಕೆ ಖಾತೆಯಲ್ಲಿರುವ ಮೊತ್ತದ ಶೇ.50 ರಷ್ಟು ಭಾಗ ಹಿಂಪಡೆಯಲು ಅವಕಾಶವಿತ್ತು. ಆದರೆ ಈ ಯೋಜನೆಗೆ ಕೊಕ್ ನೀಡಲಾಗಿದೆ.