ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯಲ್ಲಿ ಜೈನ ಮುನಿಯ ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯ. ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ರಕ್ಷಣೆ ಬಗ್ಗೆ ಸರಕಾರ ಲಿಖಿತ ಭರವಸೆ ನೀಡುವವರೆಗೂ, ಅಮರಣ ಉಪವಾಸ ಮಾಡುವುದಾಗಿ ಆಚಾರ್ಯ ಗುಣಧರನಂದಿ ಮಹಾರಾಜರು ಕಣ್ಣಿರು ಹಾಕಿದರು.
ಶನಿವಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೆಕೋಡಿಯ ಶ್ರೀ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ ಹಾಗೂ ಜೈನ್ ಮುನಿಗಳಿಗೆ ತೀವ್ರ ಆತಂಕವನ್ನುಂಟು ಮಾಡಿದೆ ಎಂದರು.
ಘಟನೆ ನಡೆದು 24 ಗಂಟೆ ಕಳೆದರೂ ಸಹ ಇದುವರೆಗೆ ರಾಜ್ಯದ ಮುಖ್ಯಮಂತ್ರಿಯಾಗಲಿ ಸಚಿವರಾಗಲಿ ಒಂದೇ ಒಂದು ಹೇಳಿಕೆ ನೀಡಿಲ್ಲ. ಸರಕಾರ ಒಂದು ಸಮಾಜಕ್ಕೆ ಸೀಮಿತವೇ ಎನ್ನುವಂತಾಗಿದೆ. ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಅವರು ಉತ್ತಮ ಕಾರ್ಯ ಮಾಡಿದ್ದ 4 ಗಂಟೆಯಲ್ಲಿಯೇ ಆರೋಪಿಗಳನ್ನು ಬಂಧಿಸಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದರು.
ಸರ್ಕಾರಕ್ಕೆ ನಮ್ಮಂತ ಅಲ್ಪ ಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು ಎಂದು ಗಳಗಳನೆ ಕಣ್ಣೀರು ಸುರಿಸಿದ ಜೈನಮುನಿ ಗುಣಧರನಂದಿ ಮಹಾರಾಜರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖನ ಮಾಡುತ್ತೇನೆ. ಸರಕಾರ ನಮಗೆ ರಕ್ಷಣೆಯ ಲಿಖಿತ ಭರವಸೆ ನೀಡಬೇಕು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.