ಮನೆ ರಾಷ್ಟ್ರೀಯ ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಆದಿತ್ಯ ಠಾಕ್ರೆ

ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ: ಆದಿತ್ಯ ಠಾಕ್ರೆ

0

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.

Join Our Whatsapp Group

ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಅಜಿತ್ ಪವಾರ್, ಇತರ ಎಂಟು ಎನ್ ಸಿಪಿ ಶಾಸಕರು ರಾಜ್ಯದ ಮೈತ್ರಿ ಸರಕಾರಕ್ಕೆ ಸೇರಿದ ನಂತರ ಶಿಂಧೆ ಅವರ ಮುಖ್ಯಮಂತ್ರಿ ಕುರ್ಚಿಗೆ ಅಪಾಯ ಎದುರಾಗಬಹುದು. “ರಾಜೀನಾಮೆ ನೀಡುವಂತೆ” ಶಿಂಧೆ ಅವರನ್ನು ಕೇಳಲಾಗಿದೆ ಎಂದು ಠಾಕ್ರೆ ಹೇಳಿದರು.

ಶಿಂಧೆ ನೇತೃತ್ವದ ಸರಕಾರದಲ್ಲಿ ಅಜಿತ್ ಪವಾರ್ ಪ್ರಸ್ತುತ ಉಪ ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ (ಏಕನಾಥ್ ಶಿಂಧೆ) ಅವರಿಗೆ ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಹಾಗೂ ಸರಕಾರದಲ್ಲಿ ಸ್ವಲ್ಪ ಬದಲಾವಣೆಯಾಗಬಹುದು ಎಂಬ ಮಾತನ್ನು ನಾನು ಕೇಳಲ್ಪಟ್ಟೆ ಎಂದು ಆದಿತ್ಯ ಠಾಕ್ರೆ ಮಾಧ್ಯಮಗಳಿಗೆ ತಿಳಿಸಿದರು.