ಕೋಲ್ಕತ್ತಾ: ಹಿಂಸಾಚಾರ, ಗಲಭೆ ನಡುವೆ ಮುಕ್ತಾಯಗೊಂಡ ಮೂರು ಹಂತದ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ ಭದ್ರತೆಯಲ್ಲಿ ಇಂದು (ಜುಲೈ 11) ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.
ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿ ಮತ್ತು ಗ್ರಾಮ ಪಂಚಾಯತ್ ಗಳ 73,887 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ರಾಜ್ಯದ 22 ಜಿಲ್ಲೆಗಳಲ್ಲಿ 339 ಸ್ಥಳಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 2.6 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದಿನ ಫಲಿತಾಂಶದಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.
ಮತ ಎಣಿಕೆ ಕೇಂದ್ರದ ಸುತ್ತ ಗಲಭೆಗಳು ನಡೆಯದಂತೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಸಾಕಷ್ಟು ಭಿಗಿ ಭದ್ರತೆ ಒದಗಿಸಲಾಗಿದೆ ಅಲ್ಲದೆ ಯಾವುದೇ ಅಹಿತಕರ ಘಟನೆ ನಡೆದರೂ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.
ಕಳೆದ ತಿಂಗಳ ಆರಂಭದಲ್ಲಿ ಪಂಚಾಯತ್ ಚುನಾವಣೆಯ ದಿನಾಂಕವನ್ನು ಘೋಷಿಸಿದಾಗಿನಿಂದ ರಾಜ್ಯಾದ್ಯಂತ ರಾಜಕೀಯ ಘರ್ಷಣೆಯಲ್ಲಿ 33 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಒಟ್ಟು ಮೂರು ಹಂತದ ಪಂಚಾಯಿತಿ ಚುನಾವಣೆಗೆ 61 ಸಾವಿರಕ್ಕೂ ಅಧಿಕ ಬೂತ್ ಗಳಲ್ಲಿ ಜುಲೈ 8ರಂದು ಮತದಾನ ನಡೆದಿದ್ದು, ಶೇ.80.71ರಷ್ಟು ಮತದಾನವಾಗಿದೆ.
ಹಲವೆಡೆ ಮತಪೆಟ್ಟಿಗೆಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿ ಕೆರೆಗೆ ಎಸೆದು ಹಿಂಸಾಚಾರ ನಡೆಸಲಾಯಿತು. ಮತದಾನದ ದಿನದಂದು ಹಿಂಸಾಚಾರದ ಪ್ರಮಾಣ ಎಷ್ಟಿತ್ತೆಂದರೆ ಸುಮಾರು 696 ಬೂತ್ ಗಳಲ್ಲಿ ಮರುಮತದಾನ ಮಾಡಬೇಕಾದ ಸ್ಥಿತಿಯೂ ನಿರ್ಮಾಣವಾಯಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.