ಮನೆ ರಾಜ್ಯ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ, ಬಾಳೆ ಹಣ್ಣು ನೀಡಲು ನಿರ್ಧಾರ: ಮಧು ಬಂಗಾರಪ್ಪ

ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ, ಬಾಳೆ ಹಣ್ಣು ನೀಡಲು ನಿರ್ಧಾರ: ಮಧು ಬಂಗಾರಪ್ಪ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡುವ ಮನವಿಯನ್ನು ಅನುಮೋದಿಸಿದ್ದಾರೆ. ಮೊಟ್ಟೆ ತಿನ್ನದೇ ಇರುವವರು ಚಿಕ್ಕಿ ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

Join Our Whatsapp Group

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್​ ಡಿಎಮ್​ಸಿ ಅವರಿಗೆ ಎಲ್ಲಾ ಅಧಿಕಾರ ಕೊಟ್ಟಿದ್ದೇವೆ. ಶೂ ವಿಚಾರ ಕೂಡ ಅವರಿಗೆ ಅಧಿಕಾರ ಕೊಟ್ಟಿದ್ದೇವೆ. 280 ಕೋಟಿ ಈ ಮೊಟ್ಟೆ ಕೊಡಲು ಸದ್ಯ ಯೋಜನೆ ಮಾಡಿಕೊಂಡಿದ್ದೇವೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಕೊಡಲಾಗುತ್ತದೆ. ಕ್ವಾಲಿಟಿ ಚೆನ್ನಾಗಿಲ್ಲ ಅಂದರೇ ಎಸ್ ​ಡಿಎಮ್​ ಸಿ ಅವರೇ ಜವಾಬ್ದಾರಿ ಎಂದು ಹೇಳಿದ್ದಾರೆ.

ನಾನು ಅಧಿಕಾರಕ್ಕೆ ಬಂದಾಗ ನನ್ನ ಕ್ಷೇತ್ರದಲ್ಲಿ 52 ಶಾಲೆಯಲ್ಲಿ ಶಿಕ್ಷಕರೇ ಇರಲಿಲ್ಲ. ಎಷ್ಟೋ ಪೋಷಕರು ಖಾಸಗಿ ಶಾಲೆಗೆ ಮಕ್ಕಳನ್ನ ಸೇರಿಸುತ್ತಾರೆ. ನಾವು ಮುಂದಿನ ಎಂಟು ತಿಂಗಳ ಒಳಗೆ ಕೆಲವೊಂದಿಷ್ಟು ಪ್ಲಾನ್ ಮಾಡಿಕೊಂಡಿದ್ದೇವೆ. ಈ ವ್ಯವಸ್ಥೆ ಯಾವ ತರ ನಡೆಯುತ್ತೆ ಅನ್ನೋದನ್ನ ನಾನು ಕೂಡ ಈಗ ತಿಳಿದು ಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಹಾಗೂ ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ. ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಸ್ ಕೋರ್ಟ್​ ನಲ್ಲಿದೆ.  ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕಿದೆ. ಪಠ್ಯ ಪುಸ್ತಕ ಪರಿಷ್ಕೃಣೆ ತುಂಬಾ ಮಾಡಬೇಕಿದೆ. ಸದ್ಯ ನಾವು ಕೆಲವು ಮಾತ್ರ ಪರಿಷ್ಕರಣೆ ಮಾಡಬೇಕಿದೆ. ಮುಂದಿನ ವರ್ಷದಿಂದ ಪಿಯು ಪರೀಕ್ಷಾ ಮಾದರಿಯಲ್ಲಿಯೂ ಬದಲಾವಣೆ ಮಾಡುತ್ತೇವೆ. 20 ಆಂತರಿಕ ಅಂಕ ನೀಡಲು ಆದೇಶ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.