ಮನೆ ರಾಜ್ಯ ಅಕ್ಕಿಗೆ ಹಣ ನೀಡುವ ಬದಲು ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಸರ್ಕಾರಕ್ಕೆ ಹೆಚ್ ಡಿಕೆ ಸಲಹೆ

ಅಕ್ಕಿಗೆ ಹಣ ನೀಡುವ ಬದಲು ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಸರ್ಕಾರಕ್ಕೆ ಹೆಚ್ ಡಿಕೆ ಸಲಹೆ

0

ಬೆಂಗಳೂರು: 5ಕೆಜಿ ಹೆಚ್ಚುವರಿ ಅಕ್ಕಿಗೆ ಹಣ ನೀಡುವ ಬದಲು  ಬೇಳೆ, ಎಣ್ಣೆ, ಬೆಲ್ಲ ವಿತರಿಸಿ ಎಂದು ರಾಜ್ಯ ಸರ್ಕಾರಕ್ಕೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು.

Join Our Whatsapp Group

ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್​​.ಡಿ.ಕುಮಾರಸ್ವಾಮಿ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ‌ ಕೊರತೆ ಇದೆ. ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಸಲಹೆ ನೀಡಿದರು.

ಹಾಗೆಯೇ 5 ಗ್ಯಾರಂಟಿ ಮೇಲೆ ಕಾಂಗ್ರೆಸ್ ಗೆದ್ದಿದೆಯೆಂದು ವಿಶ್ಲೇಷಣೆ ಮಾಡುತ್ತಾರೆ.  ಆದರೆ, ಅದಕ್ಕೆ ನಾನು ಮಹತ್ವ ಕೊಡಲ್ಲ. ಯಾವ ನಿರೀಕ್ಷೆ ಇಟ್ಟುಕೊಂಡು ಜನ ಮತ ಕೊಟ್ಟಿದ್ದಾರೆ ಗೊತ್ತಾಗುತ್ತೆ ಎಂದು ತಿಳಿಸಿದರು.