ರಾಜ್ಯದಲ್ಲಿ ರೂ. 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ
ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿ ಇ ಎಫ್ ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.
ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.
ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ) ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳ ಕೇಂದ್ರಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇಕಡ 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇಕಡ 30ರಷ್ಟು ಇರಲಿದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಎಂಎಸ್ಎಂಇಗಳಿಗಾಗಿ ಸಿ.ಇ.ಎಫ್.ಸಿ. ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ.
ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂಪಾಯಿ ವೆಚ್ಚವಾಗಲಿದೆ.
ಇವುಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ
ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗುತ್ತದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್ ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ವಿವರಿಸಿದರು.
ಈ ಪ್ರಸ್ತಾವ ಸ್ವಾಗತಾರ್ಹ. ಸರ್ಕಾರವೂ ಎಂ.ಎಸ್.ಎಂ.ಇ.ಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.
ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಇದ್ದರು.
ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಇದ್ದರು.
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
ಹೊಸ್ತಿಲ ಪೂಜೆ ಮಾಡಿದರೆ ಏನು ಲಾಭ ಗೊತ್ತಾ..
ವಿವಾಹಿತ ಮಹಿಳೆಯರ ಶೋಭೆ ಹೆಚ್ಚಿಸುವ ತಾಳಿ ಕುಂಕುಮ ಮತ್ತು ಕಾಲುಂಗುರದ ಮಹತ್ವ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.