ಮೈಸೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಬದ್ಧ ತನಿಖೆಗೆ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಒತ್ತಾಯಿಸಲಾಯಿತು.
ಇಂದು ಒಡನಾಡಿ ಸಂಸ್ಥೆಯಲ್ಲಿ ಸಂಸ್ಥಾಪಕರಾದ ಸ್ಟ್ಯಾನ್ಲಿ ಮತ್ತು ಪರಶುರವರ ನೇತೃತ್ವದಲ್ಲಿ ಪ್ರಕರಣದ ನ್ಯಾಯಯುತ ತನಿಖೆಗೆ ಆಗ್ರಹಿಸಿ ಕೆಲ ಬುದ್ದಿ ಜೀವಿಗಳು ಮತ್ತು ಪ್ರಗತಿಪರ ಚಿಂತಕರ ಸಮಾಗಮದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣದಲ್ಲಿ ಆಗುತ್ತಿರುವ ನ್ಯಾಯ ವಿಳಂಬದ ಹಿನ್ನೆಲೆಯಲ್ಲಿ ಪ್ರಕರಣ ಕುರಿತು ಒಡನಾಡಿ ಸಂಸ್ಥೆ ಮುಖ್ಯಸ್ಥರು ಸ್ವಹಿತಾಸಕ್ತಿ ವಹಿಸಿದ್ದು ಸಂವಾದ ಕಾರ್ಯಕ್ರಮದಲ್ಲಿ ಮೃತ ಬಾಲಕಿ ತಾಯಿ, ತಂಗಿ ಸೋದರ ಮಾವ ಭಾಗಿಯಾಗಿದ್ದರು.
ಪ್ರಗತಿಪರ ಚಿಂತಕರಾದ ಸಿ.ಸವಲಿಂಗಯ್ಯ, ದಿವಾಕರ್, ಪ್ರೊ ಕಾಳೇಗೌಡ ನಾಗವಾರ, ಸವಿತಾ ಪ ಮಲ್ಲೇಶ್, ಕೆ ಗೋಪಾಲಕೃಷ್ಣ, ಮಾಜಿ ಮೇಯರ್ ಪುರುಶೋತ್ತಮ್, ಬೆಟ್ಟಯ್ಯ ಕೊಟೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಕಳೆದ 11 ವರ್ಷಗಳ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಲ್ಲಿಯ ನಿವಾಸಿ ಕುಮಾರಿ ಸೌಜನ್ಯ ಎಂಬ ಬಾಲಕಿ ಮೇಲೆ ಅತ್ಯಾಚಾರ ಕೊಲೆ ನಡೆದ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೆಲ ದುರುಳರ ದುಷ್ಕೃತ್ಯದಿಂದ ಬಾಲಕಿ ಸೌಜನ್ಯ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದು ಈ ಪ್ರಕರಣದಲ್ಲಿ ಇಂದಿಗೂ ನ್ಯಾಯ ಸಿಗದೆ ಆರೋಪಿಗಳ ಶಿಕ್ಷೆಯಾಗಿಲ್ಲ.
ಸ್ಥಳೀಯ ಪೊಲೀಸ್ ಸಿಒಡಿ ತನಿಖೆ ಹಾಗೂ ಸಿಬಿಐ ತನಿಖೆಗಳಿಂದ ಧನಾತ್ಮಕ ಬೆಳವಣಿಗೆ ಸಿಗದೆ ಬಾಲಕಿ ಪೋಷಕರು ನೊಂದಿದ್ದು, ಬಂಧಿತ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಪರಿಗಣಿಸಲ್ಪಟ್ಟಿದೆ.
ಹೀಗಾಗಿ ನಿಜವಾದ ಆರೋಪಿ ಬಂಧನಕ್ಕಾಗಿ ಪ್ರಗತಿಪರರು ಸಂವಾದದಲ್ಲಿ ಆಗ್ರಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.