ದೆಹಲಿ: ಭಾರತದ ಚಂದ್ರಯಾನ-3 ಇಂದು(ಶುಕ್ರವಾರ) ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.
ಮಿಷನ್ ಯಶಸ್ವಿಯಾದರೆ ಚಂದ್ರನ ಮೇಲೆ ಇಳಿದ ನಾಲ್ಕನೇ ರಾಷ್ಟ್ರವಾಗಲಿದೆ ಭಾರತ. ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್ ಎಲ್ ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಅನ್ನು ಕೂರಿಸಲಾಗಿದೆ.
ಇದನ್ನು ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿದ್ದು, ಈ GSLV 43.5 ಮೀಟರ್ ಎತ್ತರವಿದೆ. ಈ ಪ್ರಯಾಣವು 40 ದಿನಗಳದ್ದಾಗಿದ್ದು, ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಚಂದ್ರನ ಮೇಲೆ ಸ್ಪರ್ಶಿಸುವ ನಿರೀಕ್ಷೆಯಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ಮಿಷನ್ ಉಡಾವಣೆ ಮಾಡಿದ್ದು, ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ. ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವಿದೆ
ಮೊದಲ ಬಾರಿಗೆ, ಭಾರತದ ಈ ಮಿಷನ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಅಲ್ಲಿ ನೀರಿನ ಅಣುಗಳು ಕಂಡುಬಂದಿವೆ. 2008 ರಲ್ಲಿ ಭಾರತದ ಮೊದಲ ಚಂದ್ರಯಾನದ ಸಮಯದಲ್ಲಿ ಕಂಡುಬಂದ ಈ ಸಂಶೋಧನೆಯು ಜಗತ್ತನ್ನು ಬೆಚ್ಚಿ ಬೀಳಿಸಿತ್ತು.
ವಿಕ್ರಮ್ ಸುರಕ್ಷಿತ, ಮೃದುವಾದ ಲ್ಯಾಂಡಿಂಗ್ ಮಾಡುವಂತೆ ಮಾಡಲಾಗಿದೆ. ಲ್ಯಾಂಡರ್ ನಂತರ ರೋವರ್ ಪ್ರಗ್ಯಾನ್ ಅನ್ನು ಬಿಡುಗಡೆ ಮಾಡುತ್ತದೆ, ಇದು ಚಂದ್ರನ ದಿನಕ್ಕೆ ಚಂದ್ರನ ಮೇಲ್ಮೈಯಲ್ಲಿ ಸಂಚರಿಸಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸುತ್ತದೆ. ಇದು ಚಂದ್ರನ ಮಣ್ಣನ್ನು ವಿಶ್ಲೇಷಿಸುತ್ತದೆ, ಚಂದ್ರನ ಮೇಲ್ಮೈಯ ಸುತ್ತಲೂ ತಿರುಗಿ ಚಂದ್ರನ ಕಂಪನ ದಾಖಲಿಸಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.