ಬೆಂಗಳೂರು: ತಾಯಿಗೆ ಜೀವನಾಂಶ ನೀಡಲು ಸಾಧ್ಯವಿಲ್ಲವೆಂದ ಪುತ್ರರಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ ನೀಡಿದ್ದು, ಪ್ರತಿ ತಿಂಗಳು ತಲಾ 10 ಸಾವಿರ ಪಾವತಿಸುವಂತೆ ನಿರ್ದೇಶನ ನೀಡಿದೆ.
ಮೈಸೂರಿನ ನಿವಾಸಿಯಾದ 84 ವರ್ಷದ ವೆಂಕಟಮ್ಮ ಗಂಡು ಮಕ್ಕಳಿಂದ ದೂರವಾಗಿ ಪುತ್ರಿಯರ ಮನೆ ಸೇರಿದ್ದರು. ಜೀವನ ನಿರ್ವಹಣೆಗೆ ಇಬ್ಬರು ಪುತ್ರರಿಂದ ಜೀವನಾಂಶ ಕೊಡಿಸುವಂತೆ ಮೈಸೂರಿನ ವಿಭಾಗಾಧಿಕಾರಿಗಳನ್ನು ಕೋರಿದ್ದರು.
ಹಿರಿಯ ನಾಗರಿಕರ ಜೀವನಾಂಶ ಹಾಗೂ ಕಲ್ಯಾಣ ಕಾಯ್ದೆಯಡಿ ತಲಾ 5 ಸಾವಿರ ಜೀವನಾಂಶ ಒದಗಿಸುವಂತೆ ವಿಭಾಗಾಧಿಕಾರಿ ನೀಡಿದ್ದ ಆದೇಶ ಮಾರ್ಪಡಿಸಿದ್ದ ಜಿಲ್ಲಾಧಿಕಾರಿಗಳು ತಲಾ 10 ಸಾವಿರ ರೂಪಾಯಿ ಜೀವನಾಂಶ ಒದಗಿಸುವಂತೆ ಪುತ್ರರಿಗೆ ಆದೇಶ ನೀಡಿದ್ದರು. ಇದನ್ನು ಪ್ರಶ್ನಿಸಿ ಪುತ್ರರಾದ ಗೋಪಾಲ್, ಮಹೇಶ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೆಣ್ಣುಮಕ್ಕಳ ಚಿತಾವಣೆ ಮೇರೆಗೆ ತಾಯಿ ನಮ್ಮ ಮನೆ ತೊರೆದಿದ್ದಾರೆ. ತಾಯಿಯನ್ನು ನಾವು ಸಲಹುತ್ತೇವೆ, ಜೀವನಾಂಶ ಪಾವತಿಸಲು ಸಾಧ್ಯವಿಲ್ಲವೆಂದು ಕೋರ್ಟ್ ಗೆ ತಿಳಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಪುರಾಣ, ಉಪನಿಷತ್ಗಳನ್ನು ಉಲ್ಲೇಖಿಸಿ ತಾಯಿಯನ್ನು ಸಲಹುವ ಕರ್ತವ್ಯ ಮಕ್ಕಳದ್ದೆಂದು ತೀರ್ಪು ನೀಡಿದ್ದಾರೆ. ನಮ್ಮ ದೇಶದ ಕಾನೂನು, ಸಂಸ್ಕೃತಿ, ಧರ್ಮ, ಪರಂಪರೆ ತಂದೆ ತಾಯಿಯನ್ನು ನೋಡಿಕೊಳ್ಳುವುದು ಪುತ್ರರ ಕರ್ತವ್ಯವೆಂದು ಹೇಳಿದೆ. ರಕ್ಷತಿ ಸ್ಥವೀರೇ ಪುತ್ರ ಎಂದು ಸ್ಮೃತಿಕಾರರು ಹೇಳಿದ್ದಾಗಿ ಉಲ್ಲೇಖಿಸಿದರು.
ದೇವರನ್ನು ಆರಾಧಿಸುವ ಮೊದಲು ತಂದೆ ತಾಯಿ, ಗುರು, ಅತಿಥಿಗಳನ್ನು ಗೌರವಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನತೆ ತಮ್ಮ ಪೋಷಕರನ್ನು ಸಲಹಲು ವಿಫಲರಾಗುತ್ತಿದ್ದಾರೆ. ಇಂತಹವರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
ಇಬ್ಬರೂ ಪುತ್ರರು ದೈಹಿಕವಾಗಿ ಸಮರ್ಥರಾಗಿರುವುದರಿಂದ ತಾಯಿಗೆ ಜೀವನಾಂಶ ನೀಡಲು ಸಾಧ್ಯವಿಲ್ಲವೆಂದು ಹೇಳಲಾಗದು. ಪತ್ನಿಯನ್ನು ಸಲಹಲು ಸಮರ್ಥನಿರುವ ಪುರುಷ ಅವಲಂಬಿತ ತಾಯಿಯನ್ನು ನೋಡಿಕೊಳ್ಳಲು ಏಕೆ ಸಾಧ್ಯವಿಲ್ಲ. ಒಬ್ಬ ಮಗನಿಗೆ 3 ಮಳಿಗೆಯ ಬಾಡಿಗೆ ಬರುತ್ತಿದೆ. ತಾಯಿಯನ್ನು ತಾವೇ ನೋಡಿಕೊಳ್ಳುತ್ತೇವೆಂಬ ಪುತ್ರರ ವಾದವನ್ನು ಒಪ್ಪಲು ಸಾಧ್ಯವಿಲ್ಲ. ವಿವಾಹದ ಹಕ್ಕನ್ನು ಪುನರ್ ಸ್ಥಾಪಿಸಲು ಕಾನೂನಿದೆ. ಆದರೆ ಪುತ್ರರೊಂದಿಗೆ ವಾಸಿಸಲು ಬಯಸದ ತಾಯಿಯನ್ನು ಬಲವಂತವಾಗಿ ವಾಸಿಸುವಂತೆ ಮಾಡಲು ಯಾವುದೇ ಕಾನೂನಿಲ್ಲ ಎಂದು ಹೇಳಿದರು.
ಹೆಣ್ಣುಮಕ್ಕಳು ತಾಯಿಗೆ ಚಿತಾವಣೆ ಮಾಡುತ್ತಿದ್ದಾರೆಂಬ ಪುತ್ರರ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಲ್ಲದಿದ್ದರೆ ಈ ತಾಯಿ ಬೀದಿಗೆ ಬರಬೇಕಾಗುತ್ತಿತ್ತು. ಹೀಗಾಗಿ ತಾಯಿಯನ್ನು ಸಲಹುತ್ತಿರುವ ಪುತ್ರಿಯರ ನಡೆ ಶ್ಲಾಘನೀಯ ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಪ್ರಶಂಸಿಸಿದ್ದಾರೆ.
ಎಲ್ಲಾ ವಸ್ತುಗಳು ದುಬಾರಿಯಾಗಿರುವ ಈ ಕಾಲದಲ್ಲಿ 10 ಸಾವಿರ ಜೀವನಾಂಶ ಹೆಚ್ಚಾಯಿತೆಂಬ ಪುತ್ರರ ವಾದವನ್ನು ತಳ್ಳಿಹಾಕಿರುವ ಹೈಕೋರ್ಟ್, ತಾಯಿಗೆ ತಲಾ 10 ಸಾವಿರ ಪಾವತಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳು ನೀಡಿರುವ ಆದೇಶವನ್ನು ಎತ್ತಿ ಹಿಡಿದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.